ಬ್ರೇಕಿಂಗ್ ನ್ಯೂಸ್
22-02-26 10:43 pm Mangalore Correspondent ಕ್ರೈಂ
ಮಂಗಳೂರು, ಫೆ.22: ಅಕ್ರಮವಾಗಿ ಜಾನುವಾರುಗಳನ್ನು ಕೈಕಾಲು ಕಟ್ಟಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಲಾರಿಯನ್ನು ಅಡ್ಡಗಟ್ಟಿ 34 ಗೋವುಗಳನ್ನು ರಕ್ಷಿಸಿದ್ದಾರೆ.
ಕದ್ರಿ ಪೊಲೀಸರು ಭಾನುವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ್ದು ನಂತೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ನಿಲ್ಲಿಸಿ ಶೋಧ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಲಾರಿಯನ್ನು ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಜಾನುವಾರು ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿತ್ತು.
ಶೋಧ ಸಂದರ್ಭದಲ್ಲಿ, ಜಾನುವಾರುಗಳ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಲಾರಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ, ಲಾರಿಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ಮೂಲದ ದಸ್ತಗೀರ್ ಸಾಬ್ (45), ಖತೀಬ್ ಪಾಷಾ, ಅಯೂಬ್ ಖಾನ್ ಬಂಧಿತರು.
ಗೋವುಗಳನ್ನು ಶಿವಮೊಗ್ಗದಿಂದ ಮೂಡುಬಿದ್ರೆ - ಮಂಗಳೂರು ಮೂಲಕ ಕೇರಳದ ಹೊಸಂಗಡಿಗೆ ಸಾಗಾಟ ಮಾಡುತ್ತಿದ್ದರು. ಹೊಸಂಗಡಿಯಲ್ಲಿ ಮಾಂಸಗೈದು ಪೂರೈಕೆ ಮಾಡಲು ಯೋಜನೆ ಹಾಕಿದ್ದರು. ಆದರೆ ಮಂಗಳೂರು ಪೊಲೀಸರು ಲಾರಿಯನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕರ್ನಾಟಕ ಗೋ ಹತ್ಯೆ ತಡೆ ಮತ್ತು ಗೋ ಸಂರಕ್ಷಣಾ ಕಾಯ್ದೆ ಮತ್ತು ಕಲಂ 11 ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am