ಬ್ರೇಕಿಂಗ್ ನ್ಯೂಸ್
22-02-26 10:43 pm Mangalore Correspondent ಕ್ರೈಂ
ಮಂಗಳೂರು, ಫೆ.22: ಅಕ್ರಮವಾಗಿ ಜಾನುವಾರುಗಳನ್ನು ಕೈಕಾಲು ಕಟ್ಟಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಲಾರಿಯನ್ನು ಅಡ್ಡಗಟ್ಟಿ 34 ಗೋವುಗಳನ್ನು ರಕ್ಷಿಸಿದ್ದಾರೆ.
ಕದ್ರಿ ಪೊಲೀಸರು ಭಾನುವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ್ದು ನಂತೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ನಿಲ್ಲಿಸಿ ಶೋಧ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಲಾರಿಯನ್ನು ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಜಾನುವಾರು ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿತ್ತು.
ಶೋಧ ಸಂದರ್ಭದಲ್ಲಿ, ಜಾನುವಾರುಗಳ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಲಾರಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ, ಲಾರಿಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ಮೂಲದ ದಸ್ತಗೀರ್ ಸಾಬ್ (45), ಖತೀಬ್ ಪಾಷಾ, ಅಯೂಬ್ ಖಾನ್ ಬಂಧಿತರು.
ಗೋವುಗಳನ್ನು ಶಿವಮೊಗ್ಗದಿಂದ ಮೂಡುಬಿದ್ರೆ - ಮಂಗಳೂರು ಮೂಲಕ ಕೇರಳದ ಹೊಸಂಗಡಿಗೆ ಸಾಗಾಟ ಮಾಡುತ್ತಿದ್ದರು. ಹೊಸಂಗಡಿಯಲ್ಲಿ ಮಾಂಸಗೈದು ಪೂರೈಕೆ ಮಾಡಲು ಯೋಜನೆ ಹಾಕಿದ್ದರು. ಆದರೆ ಮಂಗಳೂರು ಪೊಲೀಸರು ಲಾರಿಯನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕರ್ನಾಟಕ ಗೋ ಹತ್ಯೆ ತಡೆ ಮತ್ತು ಗೋ ಸಂರಕ್ಷಣಾ ಕಾಯ್ದೆ ಮತ್ತು ಕಲಂ 11 ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm