ಬ್ರೇಕಿಂಗ್ ನ್ಯೂಸ್
23-02-26 11:36 am HK News Desk ಕ್ರೈಂ
ಕಾಸರಗೋಡು, ಫೆ.23: ಚಿನ್ನ ಕದ್ದಿದ್ದಾಳೆಂಬ ಆರೋಪದಿಂದ ಬೇಸತ್ತ ಎರಡು ಮಕ್ಕಳ ತಾಯಿ, ಗೃಹಿಣಿಯೊಬ್ಬಳು ಇಲಿಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಅಡೂರು ಠಾಣೆ ವ್ಯಾಪ್ತಿಯ ನಾಲತ್ತಡ್ಕ ಎಂಬಲ್ಲಿ ನಡೆದಿದೆ. ಸಾವಿಗೂ ಮುನ್ನ ವಿಡಿಯೋ ಮಾಡಿದ್ದು, ತಾನೇನೂ ತಪ್ಪು ಮಾಡಿಲ್ಲ ಎಂದು ಪರಿ ಪರಿಯಾಗಿ ಬೇಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ನಾಲತ್ತಡ್ಕ ನಿವಾಸಿ ಜಸೀಲಾ (24) ಮೃತಪಟ್ಟ ಯುವತಿ. ಕಳೆದ ಭಾನುವಾರ ಫೆ.15ರಂದು ಜಸೀಲಾ ತನ್ನ ಮನೆಯಲ್ಲಿ ವಿಷ ಸೇವಿಸಿದ್ದು, ಆಬಳಿಕ ಕಾಸರಗೋಡಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಫೆ.20ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಈಗ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ನಡೆಯ ಬಗ್ಗೆಯೂ ಆರೋಪ ಕೇಳಿಬಂದಿದೆ. ಜಸೀಲಾ ಇಬ್ಬರು ಸಣ್ಣ ಮಕ್ಕಳನ್ನು ಹೊಂದಿದ್ದು ಕಳವು ಆರೋಪದಿಂದ ಬೇಸತ್ತು ಸಾವಿಗೆ ಶರಣಾಗಿದ್ದಾಳೆ.
ಜಸೀಲಾ ಅವರು ನೆರೆಮನೆಯ ಗೆಳತಿಯೊಂದಿಗೆ ಕೋಜಿಕ್ಕೋಡ್ ತೆರಳಿದ್ದರು. ಹಿಂದಿರುಗಿ ಬಂದಿದ್ದ ಸಂದರ್ಭದಲ್ಲಿ 9.5 ಪವನ್ ಚಿನ್ನದ ಸರ ಕಳವಾಗಿತ್ತು. ಜಸೀಲಾ ಜೊತೆಗೆ ತೆರಳಿದ್ದಾಗ ಕಳವಾಗಿದ್ದೆಂದು ಹೇಳಿ ಆ ಮನೆಯವರು ಆರೋಪ ಮಾಡಿದ್ದರು. ಇದರಂತೆ, ಅಡೂರು ಪೊಲೀಸರು ಜಸೀಲಾ ಮನೆಗೆ ಬಂದು ಶೋಧ ನಡೆಸಿದ್ದರು. ಅಲ್ಲದೆ, ಆಕೆಯನ್ನು ಠಾಣೆಗೆ ಕರೆಸಿ ತೀವ್ರ ವಿಚಾರಣೆ ನಡೆಸಿದ್ದರು. ಇದರಿಂದ ಜಸೀಲಾ ಮನೆಯವರು ತೀವ್ರ ನೊಂದಿದ್ದರು. ಜಸೀಲಾ ತಾನು ಕದ್ದಿಲ್ಲ ಎಂದು ಹೇಳಿದರೂ, ಆಕೆಯ ಗಂಡ ಮತ್ತು ಅತ್ತೆ ಈಕೆಯ ಬಗ್ಗೆಯೇ ಆರೋಪ ಮಾಡಿದ್ದರು.
ನಾನು ಚಿನ್ನ ಕದ್ದಿದ್ದಾಗಿ ಆರೋಪಿಸಿ ಪೊಲೀಸರು ಮನೆಯನ್ನು ಶೋಧ ಮಾಡಿದರು. ಇದರಿಂದ ನನ್ನ ಮನೆಯವರು ತೀವ್ರ ಬೇಸರಗೊಂಡಿದ್ದಾರೆ. ನಾನು ಕದ್ದಿದ್ದರೆ ಅಲ್ವಾ ಕೊಡೋದು. ನಾನು ಎಲ್ಲಿಂದ ಚಿನ್ನ ತಂದು ಕೊಡಲಿ. ನಾನು ಸತ್ತರೆ ಇದಕ್ಕೆ ಕಿರುಕುಳ ಕೊಟ್ಟವರನ್ನೇ ಶಿಕ್ಷಿಸಬೇಕು. ನಾನು ಕದ್ದಿಲ್ಲ ಅಂದರೂ ಕೇಳುತ್ತಿಲ್ಲ. ಪೊಲೀಸರು ನನ್ನನ್ನು ಯಾಕೆ ಪೀಡಿಸುತ್ತಿದ್ದಾರೆ ಎಂದು ಆಕೆ ವಿಡಿಯೋದಲ್ಲಿ ಅಲವತ್ತುಕೊಂಡಿದ್ದಾಳೆ.
ಜಸೀಲಾ ತಾಯಿ ಮಾಧ್ಯಮಕ್ಕೆ ಮಾತನಾಡಿದ್ದು ನನ್ನ ಮಗಳು ಖುರಾನ್ ಮೇಲೆ ಕೈಯಿಟ್ಟು ಹೇಳಿದರೂ ಆಕೆಯ ಗಂಡ ಮತ್ತು ಕುಟುಂಬದವರು ಕೂಡ ನಂಬಲಿಲ್ಲ. ಚಿನ್ನ ಕಳವಾಗಿದೆ ಎಂದು ಹೇಳಿದ ಮನೆಯವರು ನಮ್ಮ ಮನೆಗೆ ಬಂದು ಬೆದರಿಕೆ ಹಾಕಿದ್ದರು. ಇದರಿಂದಾಗಿ ಮಗಳು ತೀವ್ರ ನೊಂದುಕೊಂಡಿದ್ದಳು ಎಂದಿದ್ದಾರೆ. ಈ ಬಗ್ಗೆ ಜಸೀಲಾ ಮನೆಯವರು ವಿದ್ಯಾನಗರ ಠಾಣೆಗೆ ದೂರು ನೀಡಿದ್ದಾರೆ.
ಅಡೂರು ಪೊಲೀಸರು ಚಿನ್ನ ಕಳವು ಪ್ರಕರಣ ಸಂಬಂಧಿಸಿ ಜಸೀಲಾಳನ್ನು ಕರೆದು ವಿಚಾರಣೆ ನಡೆಸಿದ್ದರು. ಆನಂತರ ಸರಿಯಾದ ಸಾಕ್ಷ್ಯ ಸಿಕ್ಕಿಲ್ಲವೆಂದು ಹಿಂದಕ್ಕೆ ಕಳಿಸಿದ್ದರು. ಸದ್ಯಕ್ಕೆ ಪೊಲೀಸರು ಯುವತಿ ಸಾವಿನ ಬಗ್ಗೆ ಮತ್ತು ಚಿನ್ನ ಕಳವು ದೂರಿನ ಬಗ್ಗೆ ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm