ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am