ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm