ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm