ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm