ಬ್ರೇಕಿಂಗ್ ನ್ಯೂಸ್
24-02-26 01:50 pm HK News Desk ಕ್ರೈಂ
ಲಕ್ನೋ, ಫೆ 25: ನಗರದ ಆಶಿಯಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣೆಯಾದರೆಂದು ದೂರು ನೀಡಿದ್ದ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನೀರು ತುಂಬಿಸುವ ಡ್ರಮ್ ಒಳಗೆ ಪತ್ತೆಯಾದ ಶಿರಚ್ಛೇದಿತ ಅರ್ಧ ದೇಹ ನೋಡಿ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ವರ್ಧಮಾನ ಪ್ಯಾಥಾಲಜಿ ಮಾಲೀಕ ಮನ್ವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20ರಿಂದ ಮನ್ವೇಂದ್ರ ಸಿಂಗ್ ಕಾಣೆಯಾಗಿದ್ದಾರೆ ಎಂದು ಪುತ್ರ ಅಕ್ಷತ್ ಪೊಲೀಸರಿಗೆ ದೂರು ನೀಡಿದ್ದ. ಆದರೆ ಘಟನೆ ನಡೆದ ಎರಡೇ ದಿನಗಳಲ್ಲಿ ಪ್ರಕರಣ ತೀವ್ರ ತಿರುವು ಪಡೆದುಕೊಂಡಿತ್ತು.
ಅಕ್ಷತ್ ಮೊದಲಿಗೆ, “ತಂದೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಮರುದಿನ ವಾಪಸ್ ಬರುತ್ತೇನೆ ಎಂದರೂ ಬಂದಿಲ್ಲ. ಅವರ ಮೂರು ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ,” ಎಂದು ಹೇಳಿದ್ದ. ಫೋನ್ ಕೊನೆಯ ಲೊಕೇಶನ್ ಕಾಕೋರಿ ಪ್ರದೇಶದಲ್ಲಿ ಪತ್ತೆಯಾದರೂ ಮೊಬೈಲ್ ಸಿಕ್ಕಿರಲಿಲ್ಲ. ಅನುಮಾನಗೊಂಡ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದಾಗ, ಪಾಪಿ ಮಗ ಸತ್ಯ ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4:30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಉಂಟಾಗಿದ್ದು, ಪರವಾನಗಿ ಪಡೆದ ಬಂದೂಕಿನಿಂದ ತಂದೆಯ ತಲೆಗೆ ಗುಂಡು ಹಾರಿಸಿದ್ದಾಗಿ ಅಕ್ಷತ್ ಒಪ್ಪಿಕೊಂಡಿದ್ದಾನೆ. ಗುಂಡು ತಾಗುತ್ತಿದ್ದಂತೆ ಮನ್ವೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಶವವನ್ನು ಮೂರನೇ ಮಹಡಿಯಿಂದ ಕೆಳಗೆ ತಂದು ಕತ್ತರಿಸಿ, ಕೆಲವು ಭಾಗಗಳನ್ನು ಕಾರಿನಲ್ಲಿ ತೆಗೆದುಕೊಂಡು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗವನ್ನು ಮನೆಯಲ್ಲೇ ನೀಲಿ ಡ್ರಮ್ನಲ್ಲಿ ಮುಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣವೇನು?
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ತಂದೆ ಒತ್ತಡ ಹೇರಿದ್ದರಿಂದ ಕೋಪಗೊಂಡ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಕ್ಷತ್ನ ತಂಗಿ ಈ ಘಟನೆಗೆ ಸಾಕ್ಷಿಯಾಗಿದ್ದರೂ, ಬೆದರಿಕೆ ಹಿನ್ನೆಲೆಯಲ್ಲಿ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎನ್ನಲಾಗಿದೆ. ಸಾಕ್ಷ್ಯ ನಾಶಗೊಳಿಸಲು ಕಾರನ್ನು ಸ್ವಚ್ಛಗೊಳಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮನ್ವೇಂದ್ರ ಸಿಂಗ್ ಮೂಲತಃ ಜಲೌನ್ ಮೂಲದವರು. ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿಕಾಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪೊಲೀಸ್ ಇಲಾಖೆ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm