ಬ್ರೇಕಿಂಗ್ ನ್ಯೂಸ್
27-02-26 09:23 pm Mangalore Correspondent ಕ್ರೈಂ
ಮಂಗಳೂರು, ಫೆ.27: ತನ್ನ ಬ್ಯಾಂಕ್ ಖಾತೆಯನ್ನು ಸ್ನೇಹಿತನೇ ದುರುಪಯೋಗ ಮಾಡಿದ್ದಾನೆಂಬ ವ್ಯಕ್ತಿಯೊಬ್ಬರ ದೂರಿನ ಬೆನ್ನತ್ತಿದ ಮಂಗಳೂರಿನ ಸೈಬರ್ ಠಾಣೆ ಪೊಲೀಸರು ಹೈದ್ರಾಬಾದ್ ನಲ್ಲಿ ಕುಳಿತು ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಐವರು ಖದೀಮರನ್ನು ಸೆರೆಹಿಡಿದಿದ್ದಾರೆ.
ಮಂಗಳೂರು ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ಎಂಬವರು ತನ್ನ ಸ್ನೇಹಿತ ಮುಲ್ಕಿ ನಿವಾಸಿ ಇಬ್ರಾಹಿಂ ಎಂಬವರಿಗೆ ಎರಡು ವರ್ಷಗಳ ಹಿಂದೆ ತನ್ನ ಚಾಲ್ತಿ ಖಾತೆಯನ್ನು ವ್ಯವಹಾರದ ಉದ್ದೇಶಕ್ಕಾಗಿ ಬಿಟ್ಟುಕೊಟ್ಟಿದ್ದರು. ಬ್ಯಾಂಕ್ ಖಾತೆಯ ಪಾಸ್ ಬುಕ್, ಎಟಿಎಂ ಕಾರ್ಡ್, ಚೆಕ್ ಬುಕ್ ಹಾಗೂ ಖಾತೆಗೆ ಲಿಂಕ್ ಆಗಿದ್ದ ಏರ್ಟೆಲ್ ಕಂಪನಿಯ ಸಿಮ್ ಕಾರ್ಡನ್ನು ನೀಡಿದ್ದರು. ಆದರೆ ತನ್ನ ಖಾತೆಯನ್ನು ದುರುಪಯೋಗ ಮಾಡಿರುವ ಬಗ್ಗೆ ಬ್ಯಾಂಕಿನಿಂದ ತಿಳಿದ ಮೊಹಮ್ಮದ್ ಇಕ್ಬಾಲ್ ಪೊಲೀಸ್ ದೂರು ನೀಡಿದ್ದರು.

ಪೊಲೀಸರು ಇಬ್ರಾಹಿಂನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ, ಕಮಿಷನ್ ಆಸೆಗೆ ಹೈದ್ರಾಬಾದ್ ನಲ್ಲಿರುವ ತಂಡಕ್ಕೆ ಬ್ಯಾಂಕ್ ಖಾತೆ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ, ಪೊಲೀಸರು ಅಲ್ಲಿಗೆ ತೆರಳಿ ಐದು ಜನರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ನೆಲ್ಲೂರಿನ ಶೇಖ್ ಕರೀಮುಲ್ಲಾ ರಸೂಲ್ (27), ಕರ್ನೂಲ್ ಜಿಲ್ಲೆಯ ಬುಡಿದಿನ್ನೆ ವಂಶಿ ಅಲಿಯಾಸ್ ಗುರು(21), ಹೈದ್ರಾಬಾದ್ ನಗರದ ಪಂಡಿತಿ ಕ್ರಾಂತಿ ಕುಮಾರ್(36), ಅದೇ ಏರಿಯಾದ ಬಡೇ ಶ್ರೀನಿವಾಸ್ (35), ನೆಲ್ಲೂರಿನ ಉತ್ಪಲ ಸಂತೋಷ್ ಕೃಷ್ಣ (35) ಬಂಧಿತರು.
ಆರೋಪಿಗಳಿಂದ 18 ಮೊಬೈಲ್ ಫೋನ್, ಒಂದು ಲ್ಯಾಪ್ಟಾಪ್, ಸಿಮ್ ಕಾರ್ಡ್-12, ಚೆಕ್ ಬುಕ್ -15, ಬ್ಯಾಂಕ್ ಪಾಸ್ ಬುಕ್ -12, ಡೆಬಿಟ್ ಕಾರ್ಡ್ -18 ವಶಕ್ಕೆ ಪಡೆಯಲಾಗಿದೆ. ಸದ್ರಿ ಆರೋಪಿಗಳು ಸಾಮಾಜಿಕ ಮಾಧ್ಯಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಾಡಿಗೆ ನೀಡಿದರೆ 4ರಿಂದ 6ರಷ್ಟು ಕಮಿಷನ್ ನೀಡುವುದಾಗಿ ಆಕರ್ಷಕ ಜಾಹೀರಾತುಗಳನ್ನು ನೀಡಿ, ಸಾರ್ವಜನಿಕರಿಂದ ಬ್ಯಾಂಕ್ ಮಾಹಿತಿ ಪಡೆದು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ರವಾನಿಸಿ ವಂಚನೆ ಎಸಗುತ್ತಿದ್ದರು. ಇದಕ್ಕಾಗಿ ದೊಡ್ಡ ಮೊತ್ತದ ಹಣವನ್ನು ವಂಚಕರಿಂದ ಪಡೆಯುತ್ತಿದ್ದರು.
ಮಂಗಳೂರಿನ ಮೊಹಮ್ಮದ್ ಇಕ್ಬಾಲ್ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಯ ಮೇಲೆ ಎನ್ ಸಿಆರ್ ಪಿ ಪೋರ್ಟಲ್ ನಲ್ಲಿ ದೇಶಾದ್ಯಂತ 5 ಪ್ರಕರಣ ದಾಖಲಾಗಿದೆ. ಆರೋಪಿತರ ಮೊಬೈಲ್ ಮತ್ತು ಲ್ಯಾಪ್ ಟಾಪ್ ಪರಿಶೀಲಿಸಿದಾಗ 72 ಖಾತೆಗಳ ವಿವರಗಳು ಲಭಿಸಿದ್ದು ಅದರಲ್ಲಿ 30 ಬ್ಯಾಂಕ್ ಖಾತೆಗಳ ವಿರುದ್ಧ ಎನ್ ಸಿಆರ್ ಪಿ ಪೋರ್ಟಲ್ ನಲ್ಲಿ 272ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದು ಕಂಡುಬಂದಿದೆ. ಸದ್ರಿ ವಂಚಕರ ತಂಡವು ಫೆ.26ರಂದು ಒಂದೇ ದಿನ ಎರಡು ಕೋಟಿಗೂ ಹೆಚ್ಚಿನ ವಹಿವಾಟು ನಡೆಸಿರುವುದು ತನಿಖೆಯ ವೇಳೆ ಪತ್ತೆಯಾಗಿದೆ. ಪೊಲೀಸರು ಹಠಾತ್ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿದೇಶದಲ್ಲಿದ್ದು ಸೈಬರ್ ವಂಚನೆ ಎಸಗುತ್ತಿರುವ ಜಾಲವನ್ನು ಭೇದಿಸಲು ಕ್ರಮ ಕೈಗೊಂಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm