ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm