ಬ್ರೇಕಿಂಗ್ ನ್ಯೂಸ್
10-03-26 01:49 pm HK News Staffer ಕ್ರೈಂ
ಬಾಗಲಕೋಟೆ, ಮಾ.10: ಇತ್ತೀಚಿಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲೇ ಕೊಲೆ ಸುಲಿಗೆಯಂತಹ ಕೃತ್ಯಗಳಲ್ಲಿ ಅಪ್ರಾಪ್ತರು ಭಾಗಿಯಾಗ್ತಿರುವ ವಿಚಾರ ಆಘಾತಕಾರಿಯಾಗಿದೆ. ಬಳ್ಳಾರಿ ಗುರುಕುಲದಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕನನ್ನ ಹತ್ಯೆಗೈದ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನಿಂದ ಯುವಕನ ಕೊಲೆ ನಡೆದಿದೆ.
ಹೋಳಿ ಹಬ್ಬದಂದು ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಪರಿಚಿತರೇ ಆಗಿರೋ 16 ವರ್ಷದ ಅಪ್ರಾಪ್ತ ಬಾಲಕ ಹಾಗೂ ಕೊಲೆಯಾದ ರಾಹುಲ್ ಬಾಹುಬಲಿ ಸಪ್ತಸಾಗರ (19) ನಡುವೆ ಹೋಳಿ ಹಬ್ಬದಂದು ಜಗಳ ಶುರುವಾಗಿದೆ. ಜಗಳದಲ್ಲಿ ರಾಹುಲ್ ತನ್ನನ್ನು ಹೊಡೆದಿರುವುದಾಗಿ ಬಾಲಕ ತನ್ನ ಸ್ನೇಹಿತೆ ಹಾಗೂ ಗೆಳೆಯರ ಮುಂದೆ ಹೇಳಿಕೊಂಡಿದ್ದನಂತೆ. ಬಳಿಕ ಬಾಲಕನ ಬಿಲ್ಡಪ್ ವಿಚಾರ ಯುವಕನ ಕೋಪಕ್ಕೆ ಕಾರಣವಾಗಿದೆ.
ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ;
ಹೊಡೆದಿರೋದಾಗಿ ಹೇಳಿಕೊಂಡು ಓಡಾಡ್ತಿದ್ದ ಬಾಲಕನನ್ನ ಯುವಕ ರಾಹುಲ್ ಕಳೆದ ರಾತ್ರಿ ಮಾತಾಡಬೇಕು ಎಂದು ದೇವಸ್ಥಾನದ ಬಳಿ ಕರೆದಿದ್ದ. ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದೇ ವೇಳೆ ಇಬ್ಬರ ಜಗಳ ತಡೆಯಲು ಸ್ಥಳದಲ್ಲಿದ್ದ ಸ್ನೇಹಿತರು ಪ್ರಯತ್ನ ಮಾಡಿದ್ರು ಸಾಧ್ಯವಾಗಲಿಲ್ಲ.
ಕುತ್ತಿಗೆಗೆ ಇರಿದು ಕೊಲೆಗೈದ ಬಾಲಕ:
ಈ ವೇಳೆ ಬೈಕ್ ಕೀ ಚೈನ್ ನಲ್ಲಿದ್ದ ಚಾಕುವಿನಿಂದ ರಾಹುಲ್ ಕುತ್ತಿಗೆಗೆ ಇರಿದು ಬಾಲಕನೇ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಮೃತ ಯುವಕ ಸೆಕೆಂಡ್ ಇಯರ್ ಡಿಪ್ಲೋಮಾ ವಿದ್ಯಾರ್ಥಿ ಆಗಿದ್ದಾನೆ. ಇತ್ತ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm