ಬ್ರೇಕಿಂಗ್ ನ್ಯೂಸ್
10-03-26 01:49 pm HK News Staffer ಕ್ರೈಂ
ಬಾಗಲಕೋಟೆ, ಮಾ.10: ಇತ್ತೀಚಿಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲೇ ಕೊಲೆ ಸುಲಿಗೆಯಂತಹ ಕೃತ್ಯಗಳಲ್ಲಿ ಅಪ್ರಾಪ್ತರು ಭಾಗಿಯಾಗ್ತಿರುವ ವಿಚಾರ ಆಘಾತಕಾರಿಯಾಗಿದೆ. ಬಳ್ಳಾರಿ ಗುರುಕುಲದಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕನನ್ನ ಹತ್ಯೆಗೈದ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನಿಂದ ಯುವಕನ ಕೊಲೆ ನಡೆದಿದೆ.
ಹೋಳಿ ಹಬ್ಬದಂದು ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಪರಿಚಿತರೇ ಆಗಿರೋ 16 ವರ್ಷದ ಅಪ್ರಾಪ್ತ ಬಾಲಕ ಹಾಗೂ ಕೊಲೆಯಾದ ರಾಹುಲ್ ಬಾಹುಬಲಿ ಸಪ್ತಸಾಗರ (19) ನಡುವೆ ಹೋಳಿ ಹಬ್ಬದಂದು ಜಗಳ ಶುರುವಾಗಿದೆ. ಜಗಳದಲ್ಲಿ ರಾಹುಲ್ ತನ್ನನ್ನು ಹೊಡೆದಿರುವುದಾಗಿ ಬಾಲಕ ತನ್ನ ಸ್ನೇಹಿತೆ ಹಾಗೂ ಗೆಳೆಯರ ಮುಂದೆ ಹೇಳಿಕೊಂಡಿದ್ದನಂತೆ. ಬಳಿಕ ಬಾಲಕನ ಬಿಲ್ಡಪ್ ವಿಚಾರ ಯುವಕನ ಕೋಪಕ್ಕೆ ಕಾರಣವಾಗಿದೆ.
ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ;
ಹೊಡೆದಿರೋದಾಗಿ ಹೇಳಿಕೊಂಡು ಓಡಾಡ್ತಿದ್ದ ಬಾಲಕನನ್ನ ಯುವಕ ರಾಹುಲ್ ಕಳೆದ ರಾತ್ರಿ ಮಾತಾಡಬೇಕು ಎಂದು ದೇವಸ್ಥಾನದ ಬಳಿ ಕರೆದಿದ್ದ. ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದೇ ವೇಳೆ ಇಬ್ಬರ ಜಗಳ ತಡೆಯಲು ಸ್ಥಳದಲ್ಲಿದ್ದ ಸ್ನೇಹಿತರು ಪ್ರಯತ್ನ ಮಾಡಿದ್ರು ಸಾಧ್ಯವಾಗಲಿಲ್ಲ.
ಕುತ್ತಿಗೆಗೆ ಇರಿದು ಕೊಲೆಗೈದ ಬಾಲಕ:
ಈ ವೇಳೆ ಬೈಕ್ ಕೀ ಚೈನ್ ನಲ್ಲಿದ್ದ ಚಾಕುವಿನಿಂದ ರಾಹುಲ್ ಕುತ್ತಿಗೆಗೆ ಇರಿದು ಬಾಲಕನೇ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಮೃತ ಯುವಕ ಸೆಕೆಂಡ್ ಇಯರ್ ಡಿಪ್ಲೋಮಾ ವಿದ್ಯಾರ್ಥಿ ಆಗಿದ್ದಾನೆ. ಇತ್ತ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm