ಬ್ರೇಕಿಂಗ್ ನ್ಯೂಸ್
10-03-26 01:49 pm HK News Staffer ಕ್ರೈಂ
ಬಾಗಲಕೋಟೆ, ಮಾ.10: ಇತ್ತೀಚಿಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲೇ ಕೊಲೆ ಸುಲಿಗೆಯಂತಹ ಕೃತ್ಯಗಳಲ್ಲಿ ಅಪ್ರಾಪ್ತರು ಭಾಗಿಯಾಗ್ತಿರುವ ವಿಚಾರ ಆಘಾತಕಾರಿಯಾಗಿದೆ. ಬಳ್ಳಾರಿ ಗುರುಕುಲದಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕನನ್ನ ಹತ್ಯೆಗೈದ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನಿಂದ ಯುವಕನ ಕೊಲೆ ನಡೆದಿದೆ.
ಹೋಳಿ ಹಬ್ಬದಂದು ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಪರಿಚಿತರೇ ಆಗಿರೋ 16 ವರ್ಷದ ಅಪ್ರಾಪ್ತ ಬಾಲಕ ಹಾಗೂ ಕೊಲೆಯಾದ ರಾಹುಲ್ ಬಾಹುಬಲಿ ಸಪ್ತಸಾಗರ (19) ನಡುವೆ ಹೋಳಿ ಹಬ್ಬದಂದು ಜಗಳ ಶುರುವಾಗಿದೆ. ಜಗಳದಲ್ಲಿ ರಾಹುಲ್ ತನ್ನನ್ನು ಹೊಡೆದಿರುವುದಾಗಿ ಬಾಲಕ ತನ್ನ ಸ್ನೇಹಿತೆ ಹಾಗೂ ಗೆಳೆಯರ ಮುಂದೆ ಹೇಳಿಕೊಂಡಿದ್ದನಂತೆ. ಬಳಿಕ ಬಾಲಕನ ಬಿಲ್ಡಪ್ ವಿಚಾರ ಯುವಕನ ಕೋಪಕ್ಕೆ ಕಾರಣವಾಗಿದೆ.
ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ;
ಹೊಡೆದಿರೋದಾಗಿ ಹೇಳಿಕೊಂಡು ಓಡಾಡ್ತಿದ್ದ ಬಾಲಕನನ್ನ ಯುವಕ ರಾಹುಲ್ ಕಳೆದ ರಾತ್ರಿ ಮಾತಾಡಬೇಕು ಎಂದು ದೇವಸ್ಥಾನದ ಬಳಿ ಕರೆದಿದ್ದ. ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದೇ ವೇಳೆ ಇಬ್ಬರ ಜಗಳ ತಡೆಯಲು ಸ್ಥಳದಲ್ಲಿದ್ದ ಸ್ನೇಹಿತರು ಪ್ರಯತ್ನ ಮಾಡಿದ್ರು ಸಾಧ್ಯವಾಗಲಿಲ್ಲ.
ಕುತ್ತಿಗೆಗೆ ಇರಿದು ಕೊಲೆಗೈದ ಬಾಲಕ:
ಈ ವೇಳೆ ಬೈಕ್ ಕೀ ಚೈನ್ ನಲ್ಲಿದ್ದ ಚಾಕುವಿನಿಂದ ರಾಹುಲ್ ಕುತ್ತಿಗೆಗೆ ಇರಿದು ಬಾಲಕನೇ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಮೃತ ಯುವಕ ಸೆಕೆಂಡ್ ಇಯರ್ ಡಿಪ್ಲೋಮಾ ವಿದ್ಯಾರ್ಥಿ ಆಗಿದ್ದಾನೆ. ಇತ್ತ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm