ಬ್ರೇಕಿಂಗ್ ನ್ಯೂಸ್
10-03-26 07:01 pm HK News Staffer ಕ್ರೈಂ
Photo credits : FILE PHOTO
ಬೆಳ್ತಂಗಡಿ, ಮಾರ್ಚ್ 10: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.
ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.
ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) ನಂತೆ ಪ್ರಕರಣ ದಾಖಲಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm