ಬ್ರೇಕಿಂಗ್ ನ್ಯೂಸ್
10-03-26 08:32 pm Mangaluru Staffer ಕ್ರೈಂ
ಮಂಗಳೂರು, ಮಾರ್ಚ್ 10: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಸಿದ ಮೊಬೈಲ್ಗಳು ಪತ್ತೆಯಾಗಿವೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಸುಜೀಶ್ ಮತ್ತು ಕಾನ್ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಮಯದಲ್ಲಿ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟವನ್ನು ಪತ್ತೆಹಚ್ಚುವುದಕ್ಕಾಗಿ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ರೈಲು ನಿಲ್ದಾಣದ ಸಿಸಿಟಿವಿ ಇನ್ನಿತರ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಗ್ಗಳು ಪತ್ತೆಯಾದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಅಪರಾಧ ವಿಭಾಗದ ಗುಪ್ತಚರ ದಳ (CIB) ಮತ್ತು ರೈಲ್ವೆ ಪೊಲೀಸರು (GRP) ಇಬ್ಬರು ಶಂಕಿತರಿಗಾಗಿ ಶೋಧ ನಡೆಸುತ್ತಿದ್ದಾರೆ. ಮೊಬೈಲ್ ಗಳನ್ನು ಎಲ್ಲಿಗೆ, ಯಾವ ಉದ್ದೇಶಕ್ಕಾಗಿ ಒಯ್ಯಲಾಗುತ್ತಿತ್ತು, ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಆಗಬೇಕಷ್ಟೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm