ಬ್ರೇಕಿಂಗ್ ನ್ಯೂಸ್
11-03-26 10:58 am HK News Staffer ಕ್ರೈಂ
ಉಳ್ಳಾಲ: ಮಾ-11: ಕಳೆದ ಸೋಮವಾರದಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಶವವು ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಸೋಮನಾಥ ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಲ್ಲಿ ಯುವಕ ಆತಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೊಣಾಜೆಯ ಮುಚ್ಚಿಲ ಕೋಡಿಯ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ ( 32)ಮೃತ ಯುವಕನಾಗಿದ್ದಾನೆ.



ಮಂಗಳೂರಿನ ಕದ್ರಿಯ ವೇದ ಮೋಟಾರ್ಸ್ ನಲ್ಲಿ ಉದ್ಯೋಗದಲ್ಲಿದ್ದ ವಿವೇಕ್ ಸೋಮವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿದ್ದರು.ಅಂದು ರಾತ್ರಿ 9 ಗಂಟೆಯ ಸುಮಾರಿಗೆ ತಾಯಿಗೆ ಫೋನ್ ಮಾಡಿ ದೇವಸ್ಥಾನಕ್ಕೆ ತೆರಳುವುದಾಗಿ ತಿಳಿಸಿದ್ದರೆನ್ನಲಾಗಿದೆ.ಮಧ್ಯರಾತ್ರಿ 12 ಗಂಟೆಯಾದರೂ ಮಗ ಮನೆಗೆ ವಾಪಸ್ಸು ಬರದೇ ಇದ್ದ ಕಾರಣ ತಾಯಿ ಪೋನ್ ಮಾಡಿದ್ದು,ವಿವೇಕ್ ಕರೆಯನ್ನ ಸ್ವೀಕರಿಸಿರಲಿಲ್ಲ.ವಿವೇಕ್ ಮಂಗಳವಾರವೂ ಮನೆಗೂ ಬಾರದೆ, ಮೊಬೈಲ್ ಕರೆಯನ್ನು ಸ್ವೀಕರಿಸದೇ ಇದ್ದಾಗ ಗಾಬರಿಗೊಂಡ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದು,ಕೊನೆಗೆ ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ವಿವೇಕ್ ಅವರ ದ್ವಿಚಕ್ರ ವಾಹನದ ಜೊತೆ ಪಾದರಕ್ಷೆಗಳು ಮಂಗಳವಾರ ಬೆಳಿಗ್ಗೆ ಸೋಮೇಶ್ವರ ಕಡಲಕಿನಾರೆಯಲ್ಲಿ ಪತ್ತೆಯಾಗಿತ್ತು.
ಮೃತ ವಿವೇಕ್ ವಿವಾಹಿತನಾಗಿದ್ದು ಪತ್ನಿ ಆತನಿಂದ ವಿಚ್ಚೇದನ ಪಡೆದು ಕೆಲ ದಿನಗಳ ಹಿಂದಷ್ಟೆ ಬೇರೆ ಮದುವೆಯಾಗಿದ್ದಲಂತೆ.ಇದೇ ವಿಚಾರದಲ್ಲಿ ವಿವೇಕ್ ಖಿನ್ನತೆಗೊಳಗಾಗಿ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಮೃತ ವಿವೇಕ್ ತಂದೆ,ತಾಯಿ ಮತ್ತು ಏಕೈಕ ಸಹೋದರಿಯನ್ನು ಅಗಲಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm