ಬ್ರೇಕಿಂಗ್ ನ್ಯೂಸ್
19-03-26 12:16 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 19: ಜಾತ್ರೆಗೆ ಬಂದಿದ್ದ ಅನ್ಯಮತೀಯ 17 ವರ್ಷದ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿಯ ಉಜಿರೆ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಮಾರ್ಚ್ 11ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಗೆ ಬಾಲಕ ತನ್ನ ಸ್ನೇಹಿತರೊಂದಿಗೆ ಬಂದಿದ್ದು ರಥಬೀದಿಯಲ್ಲಿ ಜಾಯಿಂಟ್ ವೀಲ್ ನೋಡಲು ಹೋಗಿದ್ದ. ಈ ವೇಳೆ, ಹಿಂದು ಹುಡುಗಿಯರ ಜೊತೆಗೆ ಬಂದಿದ್ದಾನೆಂದು ಆಕ್ಷೇಪಿಸಿದ ಅಲ್ಲಿದ್ದ ಕೆಲವರು ಬಾಲಕನನ್ನು ಬೈಕ್ನಲ್ಲಿ ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೈಕಿನಲ್ಲಿ ದೂರ ಕರೆತಂದು ಹಲ್ಲೆಗೈದು ನಿಂದಿಸಿ ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಬಿಟ್ಟು ಕಳುಹಿಸಿದ್ದರು.
ಘಟನೆಯಿಂದ ಭಯಗೊಂಡಿದ್ದ ಬಾಲಕ ಕೆಲವು ದಿನಗಳ ಬಳಿಕ ತನ್ನ ಮನೆಯಲ್ಲಿ ತಿಳಿಸಿದ್ದಾನೆ. ಇದರಂತೆ, ಮಾರ್ಚ್ 18ರಂದು ಘಟನೆಯ ಬಗ್ಗೆ ಬಾಲಕನ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಹಿಂದೂ ಸಂಘಟನೆಗೆ ಸೇರಿದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರು ಸೇರಿಕೊಂಡು ಬಾಲಕನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm