ಬ್ರೇಕಿಂಗ್ ನ್ಯೂಸ್
19-03-26 12:16 pm HK News Staffer ಕ್ರೈಂ
ಬೆಳ್ತಂಗಡಿ, ಮಾರ್ಚ್ 19: ಜಾತ್ರೆಗೆ ಬಂದಿದ್ದ ಅನ್ಯಮತೀಯ 17 ವರ್ಷದ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿಯ ಉಜಿರೆ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಮಾರ್ಚ್ 11ರಂದು ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಗೆ ಬಾಲಕ ತನ್ನ ಸ್ನೇಹಿತರೊಂದಿಗೆ ಬಂದಿದ್ದು ರಥಬೀದಿಯಲ್ಲಿ ಜಾಯಿಂಟ್ ವೀಲ್ ನೋಡಲು ಹೋಗಿದ್ದ. ಈ ವೇಳೆ, ಹಿಂದು ಹುಡುಗಿಯರ ಜೊತೆಗೆ ಬಂದಿದ್ದಾನೆಂದು ಆಕ್ಷೇಪಿಸಿದ ಅಲ್ಲಿದ್ದ ಕೆಲವರು ಬಾಲಕನನ್ನು ಬೈಕ್ನಲ್ಲಿ ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬೈಕಿನಲ್ಲಿ ದೂರ ಕರೆತಂದು ಹಲ್ಲೆಗೈದು ನಿಂದಿಸಿ ಬಾಲಕನಿಂದ ತಾನೇ ಜಾತ್ರಾ ಸ್ಥಳದಲ್ಲಿ ತಪ್ಪು ಮಾಡಿರುವುದಾಗಿ ವಿಡಿಯೋ ಹೇಳಿಕೆ ದಾಖಲಿಸಿಕೊಂಡು ಆತನನ್ನು ಬಿಟ್ಟು ಕಳುಹಿಸಿದ್ದರು.
ಘಟನೆಯಿಂದ ಭಯಗೊಂಡಿದ್ದ ಬಾಲಕ ಕೆಲವು ದಿನಗಳ ಬಳಿಕ ತನ್ನ ಮನೆಯಲ್ಲಿ ತಿಳಿಸಿದ್ದಾನೆ. ಇದರಂತೆ, ಮಾರ್ಚ್ 18ರಂದು ಘಟನೆಯ ಬಗ್ಗೆ ಬಾಲಕನ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಹಿಂದೂ ಸಂಘಟನೆಗೆ ಸೇರಿದ ಗೌರವ್ ಶೆಟ್ಟಿ, ರಮೇಶ್ ಹಾಗೂ ಇತರರು ಸೇರಿಕೊಂಡು ಬಾಲಕನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡ ಬೆಳ್ತಂಗಡಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am