ಬ್ರೇಕಿಂಗ್ ನ್ಯೂಸ್
22-03-26 09:44 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 22: ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಶನಿವಾರ ತಡರಾತ್ರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ನಡೆದ ಡ್ರಿಫ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಐಷಾರಾಮಿ ಕಾರಿನಲ್ಲಿ ಭೀಕರವಾಗಿ ಸ್ಟಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರು ನೋಟಿಸ್ ನೀಡಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾರು ಡ್ರಿಫ್ಟಿಂಗ್ ಮಾಡಿದ್ದು ರಿಕ್ಕಿ ರೈ ಅನ್ನೋದು ಇನ್ನೂ ಪಕ್ಕಾ ಆಗಿಲ್ಲ. ಆದರೆ ಕಾರಿನ ದಾಖಲೆಗಳು ಹೇಳುವ ಪ್ರಕಾರ ಲ್ಯಾಂಬೋರ್ಗಿನಿ ರಿಕ್ಕಿ ರೈಗೆ ಸೇರಿದೆ ಎನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿ ಡ್ರಿಫ್ಟಿಂಗ್ ಮಾಡಿದ್ದು ಯಾರು? ಕಾರಿನಲ್ಲಿ ಯಾರು ಪ್ರಯಾಣಿಸ್ತಿದ್ದರು ಅನ್ನೋದ್ರ ಬಗ್ಗೆ ತನಿಖೆಗೆ ಮುಂದುವರೆದಿದೆ.
ಘಟನೆ ಹಿನ್ನೆಲೆ:
ಶನಿವಾರ ಮುಂಜಾನೆ ಸುಮಾರು 2 ರಿಂದ 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಅಪಾಯಕಾರಿ ರೀತಿಯಲ್ಲಿ ಡ್ರಿಫ್ಟಿಂಗ್ ಮಾಡಿದೆ. ಈ ವೇಳೆ ರಸ್ತೆಯಲ್ಲಿದ್ದ ಇತರ ವಾಹನ ಸವಾರರು ಆತಂಕಗೊಂಡಿದ್ದು ಸ್ಟಂಟ್ನ 11 ಸೆಕೆಂಡ್ಗಳ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.
ವಿಡಿಯೋ ಆಧಾರದಲ್ಲಿ ಕಾರಿನ ಸಂಖ್ಯೆ ಕೆಎ 05 ಎನ್ಆರ್ 0009 ಅನ್ನು ಗುರುತಿಸಿದ ಪೊಲೀಸರು, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಕಾರು ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸೇರಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಸಾರ್ವಜನಿಕ ರಸ್ತೆಗಳಲ್ಲಿ ಈ ರೀತಿಯ ಡ್ರಿಫ್ಟಿಂಗ್, ವ್ಹೀಲಿಂಗ್ ಅಥವಾ ಅಪಾಯಕಾರಿ ಚಾಲನೆ ಸಂಚಾರ ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಕೃತ್ಯಗಳಿಗೆ ದಂಡ, ಶಿಕ್ಷೆ ಹಾಗೂ ಚಾಲನಾ ಪರವಾನಿಗೆ ರದ್ದುಪಡಿಸುವಂತಹ ಕಠಿಣ ಕ್ರಮಗಳೂ ವಿಧಿಸಲಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಹೃದಯ ಭಾಗದಲ್ಲೇ ನಡೆದ ಈ ಘಟನೆ, ರಸ್ತೆ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರ ಜೀವ ಭದ್ರತೆಗೆ ಅಪಾಯವಾಗುವ ಸ್ಟಂಟ್ಗಳ ವಿರುದ್ಧ ಕಾನೂನು ಕಠಿಣವಾಗಿ ಜಾರಿಯಾಗಬೇಕೆಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
#Bengaluru: #Lamborghini performs dangerous stunts in the middle of the road under the flyover at Anil Kumble Circle on MG Road, video goes viral. pic.twitter.com/mIexhgKUM1
— Siraj Noorani (@sirajnoorani) March 21, 2026
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm