ಬ್ರೇಕಿಂಗ್ ನ್ಯೂಸ್
22-03-26 09:44 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 22: ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಶನಿವಾರ ತಡರಾತ್ರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ನಡೆದ ಡ್ರಿಫ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಐಷಾರಾಮಿ ಕಾರಿನಲ್ಲಿ ಭೀಕರವಾಗಿ ಸ್ಟಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರು ನೋಟಿಸ್ ನೀಡಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾರು ಡ್ರಿಫ್ಟಿಂಗ್ ಮಾಡಿದ್ದು ರಿಕ್ಕಿ ರೈ ಅನ್ನೋದು ಇನ್ನೂ ಪಕ್ಕಾ ಆಗಿಲ್ಲ. ಆದರೆ ಕಾರಿನ ದಾಖಲೆಗಳು ಹೇಳುವ ಪ್ರಕಾರ ಲ್ಯಾಂಬೋರ್ಗಿನಿ ರಿಕ್ಕಿ ರೈಗೆ ಸೇರಿದೆ ಎನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿ ಡ್ರಿಫ್ಟಿಂಗ್ ಮಾಡಿದ್ದು ಯಾರು? ಕಾರಿನಲ್ಲಿ ಯಾರು ಪ್ರಯಾಣಿಸ್ತಿದ್ದರು ಅನ್ನೋದ್ರ ಬಗ್ಗೆ ತನಿಖೆಗೆ ಮುಂದುವರೆದಿದೆ.
ಘಟನೆ ಹಿನ್ನೆಲೆ:
ಶನಿವಾರ ಮುಂಜಾನೆ ಸುಮಾರು 2 ರಿಂದ 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಅಪಾಯಕಾರಿ ರೀತಿಯಲ್ಲಿ ಡ್ರಿಫ್ಟಿಂಗ್ ಮಾಡಿದೆ. ಈ ವೇಳೆ ರಸ್ತೆಯಲ್ಲಿದ್ದ ಇತರ ವಾಹನ ಸವಾರರು ಆತಂಕಗೊಂಡಿದ್ದು ಸ್ಟಂಟ್ನ 11 ಸೆಕೆಂಡ್ಗಳ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.
ವಿಡಿಯೋ ಆಧಾರದಲ್ಲಿ ಕಾರಿನ ಸಂಖ್ಯೆ ಕೆಎ 05 ಎನ್ಆರ್ 0009 ಅನ್ನು ಗುರುತಿಸಿದ ಪೊಲೀಸರು, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಕಾರು ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸೇರಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಸಾರ್ವಜನಿಕ ರಸ್ತೆಗಳಲ್ಲಿ ಈ ರೀತಿಯ ಡ್ರಿಫ್ಟಿಂಗ್, ವ್ಹೀಲಿಂಗ್ ಅಥವಾ ಅಪಾಯಕಾರಿ ಚಾಲನೆ ಸಂಚಾರ ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಕೃತ್ಯಗಳಿಗೆ ದಂಡ, ಶಿಕ್ಷೆ ಹಾಗೂ ಚಾಲನಾ ಪರವಾನಿಗೆ ರದ್ದುಪಡಿಸುವಂತಹ ಕಠಿಣ ಕ್ರಮಗಳೂ ವಿಧಿಸಲಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಹೃದಯ ಭಾಗದಲ್ಲೇ ನಡೆದ ಈ ಘಟನೆ, ರಸ್ತೆ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರ ಜೀವ ಭದ್ರತೆಗೆ ಅಪಾಯವಾಗುವ ಸ್ಟಂಟ್ಗಳ ವಿರುದ್ಧ ಕಾನೂನು ಕಠಿಣವಾಗಿ ಜಾರಿಯಾಗಬೇಕೆಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
#Bengaluru: #Lamborghini performs dangerous stunts in the middle of the road under the flyover at Anil Kumble Circle on MG Road, video goes viral. pic.twitter.com/mIexhgKUM1
— Siraj Noorani (@sirajnoorani) March 21, 2026
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm