ಬ್ರೇಕಿಂಗ್ ನ್ಯೂಸ್
23-03-26 03:08 pm HK News Staffer ಕ್ರೈಂ
ಮಂಗಳೂರು, ಮಾರ್ಚ್ 23: ನಿಷೇಧಿತ ಮಾದಕ ವಸ್ತು ಎಂಡಿಎಂಎ ಡ್ರಗ್ಸ್ ಅನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಮಾರ್ಚ್ 22ರಂದು ಎಂಡಿಎಂಎ ಡ್ರಗ್ಸ್ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆಹಚ್ಚಿ ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿಗಳಾದ ಹೈದರ್ @ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29), ಕಾಪು ಮೂಲದ ಹಾಲಿ ಮಂಗಳೂರಿನ ಉಜ್ಜೋಡಿ ನಿವಾಸಿ ಜೈಸನ್ ಮೆನೆಜಸ್ (26) ಎಂಬವರನ್ನು ಬಂಧಿಸಲಾಗಿದೆ.
ಆರೋಪಿಗಳ ವಶದಿಂದ ರೂ.2,50,000 ಮೌಲ್ಯದ 26 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ನಗದು ಹಣ 37,000, ಮೊಬೈಲ್ ಫೋನ್-5, ತೂಕಮಾಪನ, KA-19-AC-2245ನೇ ನಂಬ್ರದ ಆಟೋ ರಿಕ್ಷಾ, ಸಹಿತ ಒಟ್ಟು ರೂ. 4,37,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಹೈದರ್ ಆಲಿ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm