ಬ್ರೇಕಿಂಗ್ ನ್ಯೂಸ್
26-03-26 03:12 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 25 : ಮಂಗಳೂರಿನ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಕರ್ಮಕಾಂಡ ಸುದ್ದಿ ಬೆನ್ನಲ್ಲೇ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳ, ಅಶ್ಲೀಲ ಸಂದೇಶ ಹಾಗೂ ಕೊಲೆ ಬೆದರಿಕೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಸಂಬಂಧ ಲೇಡಿ ರೌಡಿಶೀಟರ್ ಯಶಸ್ವಿನಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದು, ಆರೋಪಿ ಇನ್ಸ್ ಪೆಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ದೂರಿನಲ್ಲಿ ಇನ್ಸ್ಪೆಕ್ಟರ್ ಪಾಪಣ್ಣ ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ಫೋನ್ ಕರೆಗಳು ಹಾಗೂ ವಾಟ್ಸಾಪ್ ಸಂದೇಶಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆಂದು ದೂರಿದ್ದಾರೆ.
ದೂರಿನಲ್ಲಿ ಉಲ್ಲೇಖಿಸಿರುವಂತೆ, ಪಾಪಣ್ಣ ಅವರು ‘ಚಿನ್ನ, ಮುದ್ದು, ಬಂಗಾರಿ’ ಎಂಬ ಉಲ್ಲೇಖಗಳೊಂದಿಗೆ ಅಶ್ಲೀಲ ಮಾತನಾಡಿರುವುದಷ್ಟೇ ಅಲ್ಲದೆ, ‘ಕಿಸ್ ಮಾಡ್ಬೇಕು, ಹಗ್ ಮಾಡ್ಕೊಳ್ಬೇಕು’ ಎಂಬ ರೀತಿಯ ಸಂದೇಶಗಳನ್ನು ಕಳುಹಿಸಿದ್ದಾರೆಂದು ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಪ್ರತಿಕ್ರಿಯಿಸದಿದ್ದಾಗ, ಹಲವಾರು ಬಾರಿ ಬೇರೆ ಬೇರೆ ಸಂಖ್ಯೆಯಿಂದ ಸಂಪರ್ಕ ಸಾಧಿಸಿ ಒತ್ತಡ ಹಾಕಿರುವುದಾಗಿ ಯಶಸ್ವಿನಿ ಆರೋಪಿಸಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳಿಂದ ಬಲವಾದ ದೂರು
ಸಂತ್ರಸ್ತೆ ವಾಟ್ಸಾಪ್ ಚಾಟ್ ಸ್ಕ್ರೀನ್ಶಾಟ್ಗಳು ಹಾಗೂ ಆಡಿಯೋ ದಾಖಲೆಗಳನ್ನು ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾಳೆ. ಈ ಎಲೆಕ್ಟ್ರಾನಿಕ್ ಸಾಕ್ಷ್ಯಾಧಾರಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡುವ ಸಾಧ್ಯತೆಯಿದೆ. ಪ್ರಕರಣವನ್ನು ಬಹಿರಂಗಪಡಿಸಿದರೆ, ದೂರುದಾರೆಯನ್ನು ಹಾಗೂ ಅವರ ಮಕ್ಕಳನ್ನೂ ಸುಪಾರಿ ನೀಡಿ ಕೊಲೆ ಮಾಡಿಸುವುದಾಗಿ ಇನ್ಸ್ಪೆಕ್ಟರ್ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮನೆಗೆ ಬರುವುದಾಗಿ ಹೇಳಿ ಹಲವಾರು ಬಾರಿ ಕರೆ ಮಾಡಿ ಕಿರುಕುಳ ನೀಡಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.
2017ರಲ್ಲಿ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದಾಗಲೇ ಪಾಪಣ್ಣ, ಯಶಸ್ವಿನಿಯ ಸಂಪರ್ಕ ಪಡೆದು ಕರೆ, ಮೆಸೇಜ್ ಮಾಡುತ್ತಿದ್ದರಂತೆ. ಆ ಸಮಯದಲ್ಲಿ ಕಿರಿಕಿರಿ ತಾಳಲಾರದೆ ಆತನ ಸಂಖ್ಯೆಯನ್ನು ಯಶಸ್ವಿನಿ ಬ್ಲಾಕ್ ಮಾಡಿದ್ದರು. ಆದರೆ 2026ರ ಜನವರಿಯಿಂದ, ಪಾಪಣ್ಣ ಕೋಣನಕುಂಟೆ ಠಾಣೆಗೆ ವರ್ಗಾವಣೆಯಾದ ನಂತರ ಮತ್ತೆ ಕಿರುಕುಳ ಶುರುವಾಗಿದ್ದು, ಬೇರೆ ಬೇರೆ ಸಂಖ್ಯೆಗಳ ಮೂಲಕ ಸಂಪರ್ಕ ಸಾಧಿಸಿ ಕಾಟ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ.
ಇದರ ಜೊತೆಗೆ, ತನ್ನ ವಿರುದ್ಧ ಯಾರೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಾಪಣ್ಣ ದರ್ಪ ತೋರಿದ್ದಾರೆಂಬ ಆರೋಪವೂ ಕೇಳಿಬಂದಿದೆ. ತನ್ನ ಪತ್ನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿ ಎಂಬ ಹೇಳಿಕೆಯನ್ನು ನೀಡಿ ಪ್ರಭಾವ ಬೀರುವ ಪ್ರಯತ್ನ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸ್ ಇಲಾಖೆಯ ನೈತಿಕತೆಗೆ ಪ್ರಶ್ನೆ
ಈ ಘಟನೆ ಪೊಲೀಸ್ ಇಲಾಖೆಯ ನೈತಿಕತೆ ಹಾಗೂ ಜವಾಬ್ದಾರಿತನದ ಮೇಲೆ ಗಂಭೀರ ಪ್ರಶ್ನೆ ಎತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಅನೇಕ ಆರೋಪಗಳು ಕೇಳಿಬಂದಿರುವ ಹಿನ್ನೆಲೆ, ಈ ಪ್ರಕರಣವೂ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ದೂರಿನ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ದಕ್ಷಿಣ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರಿಗೆ ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೂಚಿಸಿದ್ದಾರೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm