ಬ್ರೇಕಿಂಗ್ ನ್ಯೂಸ್
26-03-26 06:48 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 26: ಅಪ್ರಾಪ್ತ ಬಾಲಕನೊಬ್ಬ ಮಾಡಿದ ಡಬಲ್ ಮರ್ಡರ್ ಇಡೀ ರಾಜ್ಯ ರಾಜಧಾನಿಯನ್ನೇ ಬೆಚ್ಚಿ ಬೀಳಿಸಿದೆ. ಪೀಣ್ಯಾ HMT ಲೇಔಟ್ನಲ್ಲಿ 16 ವರ್ಷದ ಬಾಲಕ ಮಚ್ಚಿನಿಂದ ಕೊಚ್ಚಿ ಅಕ್ಕ ತಮ್ಮನನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.
ಯಮುನಾ (36) ಮತ್ತು ಆಕೆಯ ಸಹೋದರ ಸುದೀಪ್ (34) ಮೃತ ವ್ಯಕ್ತಿಗಳು.
ಬಾಲಕನ ತಾಯಿ ಛಾಯಾಗೆ ಮೃತ ಯಮುನಾ ಪತಿ ಮಲ್ಲೇಗೌಡನ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರದಲ್ಲಿ ಸ್ಪಷ್ಟನೆ ಪಡೆಯಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್ ಛಾಯಾ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೂವರಿಗೆ ಮಾತಿಗೆ ಮಾತು ಬೆಳೆದು ವಾಗ್ವಾದಕ್ಕೆ ತಿರುಗಿದೆ. ಈ ವೇಳೆ ಛಾಯಾಳನ್ನ ನಯನಾ ಹಾಗೂ ಸುದೀಪ್ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಛಾಯಾಳ ಅಪ್ರಾಪ್ತ ಮಗ ಮನೆಗೆ ಬಂದಿದ್ದ ಅಕ್ಕ - ತಮ್ಮನ ಮೇಲೆ ಹಲ್ಲೆ ಮಾಡಿದ್ದು, ಮಚ್ಚಿನಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ್ದಾನೆ.
ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡಿಸಿಪಿ ನಾಗೇಶ್ ಮತ್ತು FSL ತಂಡವೂ ಸ್ಥಳಕ್ಕೆ ಆಗಮಿಸಿ ತಾಂತ್ರಿಕ ಪರಿಶೀಲನೆ ನಡೆಸಿದ್ದಾರೆ. ಬಾಲಕನಿಂದ ನಡೆದ ಕ್ರೂರ ಕೃತ್ಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಣೆ, ಸಿಸಿಟಿವಿ ದಾಖಲೆ ಪರಿಶೀಲನೆ ಮತ್ತು ಕುಟುಂಬದ ಸದಸ್ಯರ ವಿವರಣೆಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಅಪ್ರಾಪ್ತ ಬಾಲಕರು ಹಲ್ಲೆ, ಕೊಲೆ ಮುಂತಾದ ಗಂಭೀರ ಅಪರಾಧಗಳಲ್ಲಿ ಭಾಗವಹಿಸುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಈ ಪ್ರಕರಣವು ಮಕ್ಕಳ ಭವಿಷ್ಯ ಮತ್ತು ಸಮಾಜದ ಸುರಕ್ಷತೆಯ ಪ್ರಶ್ನೆಯಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm