ಬ್ರೇಕಿಂಗ್ ನ್ಯೂಸ್
27-03-26 08:37 pm HK News Staffer ಕ್ರೈಂ
ಬೆಂಗಳೂರು, ಮಾ.27 : ಇತ್ತೀಚೆಗೆ ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡುತ್ತಿರುವುದು ನೋಡಿದ್ದೇವೆ. ಆದರೆ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಭಿನ್ನ ಘಟನೆಯೊಂದು ನಡೆದಿದೆ. ಇನ್ಸ್ಪೆಕ್ಟರ್ ರವಿ ಅವರ ಭ್ರಷ್ಟಾಚಾರವನ್ನು ತಾಳಲಾರದೆ, ಠಾಣೆಯ ಸಿಬ್ಬಂದಿಯೇ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಇನ್ಸ್ಪೆಕ್ಟರ್ ರವಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದು, ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ FIR ಗೂ 25 ಸಾವಿರ ‘ರೇಟ್ ಫಿಕ್ಸ್’ !
ಸಿಬ್ಬಂದಿ ಆರೋಪದ ಪ್ರಕಾರ, ಪುಟ್ಟೇನಹಳ್ಳಿ ಠಾಣೆಯಲ್ಲಿ ಕಾನೂನು ಪಾಲನೆಗಿಂತ ಹೆಚ್ಚಾಗಿ ಹಣ ವಸೂಲಿಗೆ ಆದ್ಯತೆ ನೀಡಲಾಗುತ್ತಿದೆಯಂತೆ. ಯಾವುದೇ ಎಫ್ಐಆರ್ ದಾಖಲಿಸಬೇಕಾದರೆ ಇನ್ಸ್ಪೆಕ್ಟರ್ ರವಿಗೆ ಕನಿಷ್ಠ 25 ಸಾವಿರ ರೂ. ಲಂಚ ನೀಡಲೇಬೇಕು. ಹಣ ನೀಡಿ ಪ್ರಕರಣ ದಾಖಲಿಸದಂತೆ ಒತ್ತಡವನ್ನೂ ಹಾಕಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಿಸಿಎಂ ಹೆಸರು ದರ್ಬಳಕೆ:
ಕಳೆದ ಎರಡು ವರ್ಷಗಳಿಂದ ಇನ್ಸ್ಪೆಕ್ಟರ್ ಹೆಚ್.ಕೆ. ರವಿಕುಮಾರ್ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ಇನ್ಸಪೆಕ್ಟರ್ ನವೀನ್ ಅವರನ್ನು ಪುಟ್ಟೇನ ಹಳ್ಳಿ ಠಾಣೆಗೆ ವರ್ಗಾವಣೆ ಮಾಡಿಕೊಳ್ಳಲು ಇಬ್ಬರು ಸೇರಿಕೊಂಡು ಈಗಾಗಲೆ DCM ಅವರಿಗೆ 1 ಕೋಟಿ ಹಣ ಕೊಟ್ಟಿದಾರಂತೆ. ಇನ್ನೂ ಹಣ ಹೊಂದಿಸಬೇಕು ಎಂದು ಸಿಬ್ಬಂದಿಗೆ ಹೇಳುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರ್ಗಾವಣೆ ದಂಧೆ, ವಸೂಲಿ:
ಇನ್ಸ್ಪೆಕ್ಟರ್ ಮತ್ತು ಪಿಎಸ್ಐ ಸಹ, ಚಿಕ್ಕ ಟೀ ಸ್ಟಾಲ್ಗಳಿಂದ ಹಿಡಿದು ದೊಡ್ಡ ಬಾರ್, ಪಬ್ಗಳ ವರೆಗೂ ವಸೂಲಿ ಮಾಡುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ರೌಡಿಶೀಟರ್ ಹೆಸರನ್ನು ಪಟ್ಟಿಯಿಂದ ತೆಗೆಯಲು ಲಕ್ಷಾಂತರ ರೂ. ಮುಂಗಡ ಪಡೆಯುವ ಕೆಲಸ ನಡೆಸುತ್ತಿದ್ದಾರೆ. ಉದಾಹರಣೆಗೆ ಲೇಡಿ ರೌಡಿಶೀಟರ್ ಯಶಸ್ವಿನಿ ಗೌಡಳ ಪತಿ ಮಹೇಶ್ ಅಲಿಯಾಸ್ ದಡಿಯ ಮಹೇಶ್ ಹೆಸರನ್ನು ಪಟ್ಟಿಯಿಂದ ತೆಗೆಯಲು 20 ಲಕ್ಷ ರೂ. ಲಂಚ, 2 ಲಕ್ಷ ಬೆಲೆ ಬಾಳುವ LED TV ಮತ್ತು INNOVA Cresta ಕಾರ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.
ತಿಂಗಳಿಗೆ 25 ಲಕ್ಷ ‘ಮಾಮೂಲಿ’ ವಸೂಲಿ:
ಇನ್ಸ್ಪೆಕ್ಟರ್ ನೇರವಾಗಿ ಹಣ ವಸೂಲಿ ಮಾಡದೆ, ತಮ್ಮ SB ಮತ್ತು ಅಧಿಕೃತ ಡ್ರೈವರ್ ಮೂಲಕ ತಿಂಗಳಿಗೆ ಸರಾಸರಿ 25 ಲಕ್ಷ ರೂ. ಸಂಗ್ರಹಿಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಅಕ್ರಮ ಪ್ರಕರಣಗಳಿಗೆ ದಾಳಿ ಮಾಡಿದರೆ, ಮಧ್ಯಪ್ರವೇಶಿಸಿ ಹಣ ವಸೂಲಿ ಮಾಡಿ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಪ್ರಾಮಾಣಿಕ ವರದಿಗಳನ್ನು ನೀಡಿದ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುವುದಕ್ಕೂ ಹೇಸಲ್ಲ. ಇದರ ಬಗ್ಗೆಯೂ ಆರೋಪಗಳಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm