ಬ್ರೇಕಿಂಗ್ ನ್ಯೂಸ್
27-03-26 08:37 pm HK News Staffer ಕ್ರೈಂ
ಬೆಂಗಳೂರು, ಮಾ.27 : ಇತ್ತೀಚೆಗೆ ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡುತ್ತಿರುವುದು ನೋಡಿದ್ದೇವೆ. ಆದರೆ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಭಿನ್ನ ಘಟನೆಯೊಂದು ನಡೆದಿದೆ. ಇನ್ಸ್ಪೆಕ್ಟರ್ ರವಿ ಅವರ ಭ್ರಷ್ಟಾಚಾರವನ್ನು ತಾಳಲಾರದೆ, ಠಾಣೆಯ ಸಿಬ್ಬಂದಿಯೇ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಇನ್ಸ್ಪೆಕ್ಟರ್ ರವಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದು, ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ FIR ಗೂ 25 ಸಾವಿರ ‘ರೇಟ್ ಫಿಕ್ಸ್’ !
ಸಿಬ್ಬಂದಿ ಆರೋಪದ ಪ್ರಕಾರ, ಪುಟ್ಟೇನಹಳ್ಳಿ ಠಾಣೆಯಲ್ಲಿ ಕಾನೂನು ಪಾಲನೆಗಿಂತ ಹೆಚ್ಚಾಗಿ ಹಣ ವಸೂಲಿಗೆ ಆದ್ಯತೆ ನೀಡಲಾಗುತ್ತಿದೆಯಂತೆ. ಯಾವುದೇ ಎಫ್ಐಆರ್ ದಾಖಲಿಸಬೇಕಾದರೆ ಇನ್ಸ್ಪೆಕ್ಟರ್ ರವಿಗೆ ಕನಿಷ್ಠ 25 ಸಾವಿರ ರೂ. ಲಂಚ ನೀಡಲೇಬೇಕು. ಹಣ ನೀಡಿ ಪ್ರಕರಣ ದಾಖಲಿಸದಂತೆ ಒತ್ತಡವನ್ನೂ ಹಾಕಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಿಸಿಎಂ ಹೆಸರು ದರ್ಬಳಕೆ:
ಕಳೆದ ಎರಡು ವರ್ಷಗಳಿಂದ ಇನ್ಸ್ಪೆಕ್ಟರ್ ಹೆಚ್.ಕೆ. ರವಿಕುಮಾರ್ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ಇನ್ಸಪೆಕ್ಟರ್ ನವೀನ್ ಅವರನ್ನು ಪುಟ್ಟೇನ ಹಳ್ಳಿ ಠಾಣೆಗೆ ವರ್ಗಾವಣೆ ಮಾಡಿಕೊಳ್ಳಲು ಇಬ್ಬರು ಸೇರಿಕೊಂಡು ಈಗಾಗಲೆ DCM ಅವರಿಗೆ 1 ಕೋಟಿ ಹಣ ಕೊಟ್ಟಿದಾರಂತೆ. ಇನ್ನೂ ಹಣ ಹೊಂದಿಸಬೇಕು ಎಂದು ಸಿಬ್ಬಂದಿಗೆ ಹೇಳುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರ್ಗಾವಣೆ ದಂಧೆ, ವಸೂಲಿ:
ಇನ್ಸ್ಪೆಕ್ಟರ್ ಮತ್ತು ಪಿಎಸ್ಐ ಸಹ, ಚಿಕ್ಕ ಟೀ ಸ್ಟಾಲ್ಗಳಿಂದ ಹಿಡಿದು ದೊಡ್ಡ ಬಾರ್, ಪಬ್ಗಳ ವರೆಗೂ ವಸೂಲಿ ಮಾಡುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ರೌಡಿಶೀಟರ್ ಹೆಸರನ್ನು ಪಟ್ಟಿಯಿಂದ ತೆಗೆಯಲು ಲಕ್ಷಾಂತರ ರೂ. ಮುಂಗಡ ಪಡೆಯುವ ಕೆಲಸ ನಡೆಸುತ್ತಿದ್ದಾರೆ. ಉದಾಹರಣೆಗೆ ಲೇಡಿ ರೌಡಿಶೀಟರ್ ಯಶಸ್ವಿನಿ ಗೌಡಳ ಪತಿ ಮಹೇಶ್ ಅಲಿಯಾಸ್ ದಡಿಯ ಮಹೇಶ್ ಹೆಸರನ್ನು ಪಟ್ಟಿಯಿಂದ ತೆಗೆಯಲು 20 ಲಕ್ಷ ರೂ. ಲಂಚ, 2 ಲಕ್ಷ ಬೆಲೆ ಬಾಳುವ LED TV ಮತ್ತು INNOVA Cresta ಕಾರ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.
ತಿಂಗಳಿಗೆ 25 ಲಕ್ಷ ‘ಮಾಮೂಲಿ’ ವಸೂಲಿ:
ಇನ್ಸ್ಪೆಕ್ಟರ್ ನೇರವಾಗಿ ಹಣ ವಸೂಲಿ ಮಾಡದೆ, ತಮ್ಮ SB ಮತ್ತು ಅಧಿಕೃತ ಡ್ರೈವರ್ ಮೂಲಕ ತಿಂಗಳಿಗೆ ಸರಾಸರಿ 25 ಲಕ್ಷ ರೂ. ಸಂಗ್ರಹಿಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಅಕ್ರಮ ಪ್ರಕರಣಗಳಿಗೆ ದಾಳಿ ಮಾಡಿದರೆ, ಮಧ್ಯಪ್ರವೇಶಿಸಿ ಹಣ ವಸೂಲಿ ಮಾಡಿ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಪ್ರಾಮಾಣಿಕ ವರದಿಗಳನ್ನು ನೀಡಿದ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುವುದಕ್ಕೂ ಹೇಸಲ್ಲ. ಇದರ ಬಗ್ಗೆಯೂ ಆರೋಪಗಳಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm