ಬ್ರೇಕಿಂಗ್ ನ್ಯೂಸ್
27-03-26 09:34 pm HK News Staffer ಕ್ರೈಂ
ಬೆಂಗಳೂರು, ಮಾ. 27: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಡ್ರೀಫ್ಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ದೆಹಲಿಯಿಂದ ಖರೀದಿಸಿದ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸದೇ, ಲಕ್ಷಾಂತರ ರೂಪಾಯಿ ಟ್ಯಾಕ್ಸ್ ಕಟ್ಟದೇ, ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿ ಓಡಿಸುತ್ತಿದ್ದಾರೆಯೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ರಿಕ್ಕಿ ರೈ ಕಾರಿನ ಹೊಸ ಬಣ್ಣ ಮಾಡಿಸಿ ಬೆಂಗಳೂರಿಗೆ ತಂದು, ಆರ್ಟಿಒದಲ್ಲಿ ರಿಜಿಸ್ಟ್ರೇಶನ್ ಮಾಡಿಸದೇ, KA-05 NR 0009 ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದರು. ಕಾರಿನ ವಾಸ್ತವಿಕ ನೋಂದಣಿ DL 1 CT 1515 ಆಗಿದ್ದು ಗುಜರಾತ್ ಮೂಲದ ರಬಾರ ಭಾವನಾಬೆನ್ ವಿನೋದ್ ಕುಮಾರ್ ಅವರ ಹೆಸರಿನಲ್ಲಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಈ ಅಕ್ರಮ ಬೆಳವಣಿಗೆ ಪತ್ತೆಯಾಗಿದ್ದು, ಹಿಂದೆ ಆರ್ಟಿಒ ಅಧಿಕಾರಿಗಳು ರಿಕ್ಕಿ ರೈ ಅವರನ್ನು ಎರಡು ಬಾರಿ ದಂಡಿಸಿದರೂ, ಅವರು ಟ್ಯಾಕ್ಸ್ ಕಟ್ಟದೆ ಮತ್ತು ರಿಜಿಸ್ಟ್ರೇಷನ್ ಮಾಡಿಸದೇ ಕಾರು ಓಡಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ರಿಕ್ಕಿ ರೈ ಕಾರನ್ನು ಎರಡು ಸ್ಥಳಗಳಲ್ಲಿ ಡ್ರೀಫ್ಟ್ ಮಾಡಿದ್ದು ವಿಡಿಯೋ ದೃಶ್ಯಗಳಿಂದ ಗೊತ್ತಾಗಿದೆ. ಮೊದಲು ಅನಿಲ್ ಕುಂಬ್ಳೆ ಸರ್ಕಲ್, ನಂತರ ಕಬ್ಬನ್ ಸರ್ಕಲ್. ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ರಿಕ್ಕಿ ರೈ ತಾತ್ಕಾಲಿಕವಾಗಿ “ಹೊರ ರಾಜ್ಯದಲ್ಲಿದ್ದೇನೆ, ಬರುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ, ಆದರೆ ಎರಡು ದಿನಗಳಿಂದ ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾರು ಪ್ರಸ್ತುತ ಪೊಲೀಸ್ ವಶದಲ್ಲಿರಿಸಲಾಗಿದೆ.
ಪೊಲೀಸರು ಈಗ ಡ್ರೀಫ್ಟ್ ಪ್ರಕರಣದ ಜೊತೆಗೆ ವಂಚನೆ ಪ್ರಕರಣಕ್ಕೂ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ. ಐಷಾರಾಮಿ ಕಾರಿನ ನಕಲಿ ನೋಂದಣಿ ಮತ್ತು ಟ್ಯಾಕ್ಸ್ ತಪ್ಪಿಸುವ ಪ್ರಕರಣವು ಸಾರ್ವಜನಿಕರ ಗಮನ ಸೆಳೆದಿದ್ದು, ಇದು ಬೆಂಗಳೂರಿನ ಸಂಚಾರ ನಿಯಮ ಉಲ್ಲಂಘನೆಯ ಹೊಸ ಬೆಳವಣಿಗೆ ಎಂದು ಚಿತ್ರಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm