ಬ್ರೇಕಿಂಗ್ ನ್ಯೂಸ್
27-03-26 09:34 pm HK News Staffer ಕ್ರೈಂ
ಬೆಂಗಳೂರು, ಮಾ. 27: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಡ್ರೀಫ್ಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ದೆಹಲಿಯಿಂದ ಖರೀದಿಸಿದ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸದೇ, ಲಕ್ಷಾಂತರ ರೂಪಾಯಿ ಟ್ಯಾಕ್ಸ್ ಕಟ್ಟದೇ, ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿ ಓಡಿಸುತ್ತಿದ್ದಾರೆಯೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ರಿಕ್ಕಿ ರೈ ಕಾರಿನ ಹೊಸ ಬಣ್ಣ ಮಾಡಿಸಿ ಬೆಂಗಳೂರಿಗೆ ತಂದು, ಆರ್ಟಿಒದಲ್ಲಿ ರಿಜಿಸ್ಟ್ರೇಶನ್ ಮಾಡಿಸದೇ, KA-05 NR 0009 ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದರು. ಕಾರಿನ ವಾಸ್ತವಿಕ ನೋಂದಣಿ DL 1 CT 1515 ಆಗಿದ್ದು ಗುಜರಾತ್ ಮೂಲದ ರಬಾರ ಭಾವನಾಬೆನ್ ವಿನೋದ್ ಕುಮಾರ್ ಅವರ ಹೆಸರಿನಲ್ಲಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಈ ಅಕ್ರಮ ಬೆಳವಣಿಗೆ ಪತ್ತೆಯಾಗಿದ್ದು, ಹಿಂದೆ ಆರ್ಟಿಒ ಅಧಿಕಾರಿಗಳು ರಿಕ್ಕಿ ರೈ ಅವರನ್ನು ಎರಡು ಬಾರಿ ದಂಡಿಸಿದರೂ, ಅವರು ಟ್ಯಾಕ್ಸ್ ಕಟ್ಟದೆ ಮತ್ತು ರಿಜಿಸ್ಟ್ರೇಷನ್ ಮಾಡಿಸದೇ ಕಾರು ಓಡಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ರಿಕ್ಕಿ ರೈ ಕಾರನ್ನು ಎರಡು ಸ್ಥಳಗಳಲ್ಲಿ ಡ್ರೀಫ್ಟ್ ಮಾಡಿದ್ದು ವಿಡಿಯೋ ದೃಶ್ಯಗಳಿಂದ ಗೊತ್ತಾಗಿದೆ. ಮೊದಲು ಅನಿಲ್ ಕುಂಬ್ಳೆ ಸರ್ಕಲ್, ನಂತರ ಕಬ್ಬನ್ ಸರ್ಕಲ್. ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ರಿಕ್ಕಿ ರೈ ತಾತ್ಕಾಲಿಕವಾಗಿ “ಹೊರ ರಾಜ್ಯದಲ್ಲಿದ್ದೇನೆ, ಬರುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ, ಆದರೆ ಎರಡು ದಿನಗಳಿಂದ ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾರು ಪ್ರಸ್ತುತ ಪೊಲೀಸ್ ವಶದಲ್ಲಿರಿಸಲಾಗಿದೆ.
ಪೊಲೀಸರು ಈಗ ಡ್ರೀಫ್ಟ್ ಪ್ರಕರಣದ ಜೊತೆಗೆ ವಂಚನೆ ಪ್ರಕರಣಕ್ಕೂ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ. ಐಷಾರಾಮಿ ಕಾರಿನ ನಕಲಿ ನೋಂದಣಿ ಮತ್ತು ಟ್ಯಾಕ್ಸ್ ತಪ್ಪಿಸುವ ಪ್ರಕರಣವು ಸಾರ್ವಜನಿಕರ ಗಮನ ಸೆಳೆದಿದ್ದು, ಇದು ಬೆಂಗಳೂರಿನ ಸಂಚಾರ ನಿಯಮ ಉಲ್ಲಂಘನೆಯ ಹೊಸ ಬೆಳವಣಿಗೆ ಎಂದು ಚಿತ್ರಿಸಲಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm