ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ್ ಪಠಣಕ್ಕೆ ಬ್ರೇನ್ ವಾಷ್ ಎಂದು ಟೀಕೆ, ಆರೋಪಿ ಬಂಧನ

28-03-26 07:21 pm       HK News Staffer   ಕ್ರೈಂ

2026ರ ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಮಕ್ಕಳ ಕುರಾನ್ ಪಠಿಸುವ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣ ಫೇಸ್ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಯುವಕನೊಬ್ಬ ಪ್ರಚೋದನಕಾರಿ ಕಮೆಂಟ್ ಹಾಕಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು, ಮಾರ್ಚ್ 28: 2026ರ ಜನವರಿ ತಿಂಗಳಲ್ಲಿ ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಮಕ್ಕಳ ಕುರಾನ್ ಪಠಿಸುವ) ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣ ಫೇಸ್ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಯುವಕನೊಬ್ಬ ಪ್ರಚೋದನಕಾರಿ ಕಮೆಂಟ್ ಹಾಕಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ. 

ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಗಣೇಶ್ ಪ್ರಸಾದ್ 
(41) ಬಂಧಿತ ವ್ಯಕ್ತಿ. ಈತ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ "ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ" ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. 

ಪೊಲೀಸರು ಮಾರ್ಚ್ 27ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.