ಬ್ರೇಕಿಂಗ್ ನ್ಯೂಸ್
29-03-26 06:03 pm HK News Staffer ಕ್ರೈಂ
ಉಡುಪಿ, ಮಾರ್ಚ್ 29: ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ಪ್ರಕರಣ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಆರೋಪದಡಿ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮೇಲೆ ವಾಹನ ಹಾರಿಸಲು ಯತ್ನ:
ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ನೇತೃತ್ವದ ತಂಡ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ ಕಪ್ಪು ಕಾರನ್ನು ತಡೆಗಟ್ಟಲು ಪ್ರಯತ್ನಿಸಿತು.
ಆದರೆ, ಕಾರಿನಲ್ಲಿದ್ದ ಆರೋಪಿಗಳು ವಾಹನ ನಿಲ್ಲಿಸುವ ಬದಲು ಪೊಲೀಸರ ಮೇಲೆಯೇ ಹರಿಸಲು ಯತ್ನಿಸಿದ್ದು, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಂಜುನಾಥ ಮರಬಾಡ ಅವರ ತಂಡಕ್ಕೆ ಅದೇ ಕಾರು ಸಂಶಯಾಸ್ಪದವಾಗಿ ಬೆಳ್ಮಣ್ ದಿಕ್ಕಿನಿಂದ ಬರುತ್ತಿರುವ ಮಾಹಿತಿ ಲಭ್ಯವಾಯಿತು. ವಾಹನವನ್ನು ತಡೆದಾಗ ಚಾಲಕ ಮೊದಲು ವೇಗ ಕಡಿಮೆ ಮಾಡಿದರೂ, ಬಳಿಕ ಪೊಲೀಸ್ ಅಧಿಕಾರಿಯನ್ನು ತಳ್ಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಕೊನೆಗೆ ಶಿರ್ವ ಪಟ್ಟಣದಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಜಾಲ ಬಹಿರಂಗ:
ಬಂಧಿತರನ್ನು ನಾಡೂರು ನಿವಾಸಿ ಸುದರ್ಶನ್ ಶೆಟ್ಟಿ (29), ಹೆರೂರು ನಿವಾಸಿ ಕಾರ್ತವ್ಯ ಶೆಟ್ಟಿ (27), ಮೂಡೂರು ನಿವಾಸಿ ಅರುಣ್ ಶೆಟ್ಟಿ (29), ಹೆಬ್ರಿಯ ಬೇಳಂಜೆ ನಿವಾಸಿ ತೇಜಸ್ (28) ಹಾಗೂ ಬೈಂದೂರು ತಾಲೂಕಿನ ಶಿರೂರು ನಿವಾಸಿ ಪ್ರಜ್ವಲ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.
ತನಿಖೆ ವೇಳೆ, ಆರೋಪಿಗಳು ಸಂಘಟಿತ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದು, ಜನರನ್ನು ಹಣ ಹೂಡಿಕೆ ಮಾಡಲು ಪ್ರೇರೇಪಿಸಿ ಮೋಸ ಮಾಡುತ್ತಿದ್ದರೆಂಬುದು ಬೆಳಕಿಗೆ ಬಂದಿದೆ. ಅಕ್ರಮ ಜೂಜಾಟದ ಮೂಲಕ ವಂಚನೆ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm