ಬ್ರೇಕಿಂಗ್ ನ್ಯೂಸ್
29-03-26 10:22 pm Dinesh, Mangaluru ಕ್ರೈಂ
ಉಳ್ಳಾಲ, ಮಾ.29: ತೊಕ್ಕೊಟ್ಟು ಹೆದ್ದಾರಿಯ ಫ್ಲೈ ಓವರಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ರೌಡಿಶೀಟರ್ ಆರೀಫ್ ಹುಸೇನ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ ಹಂತಕರ ಬೇಟೆಗೆ ಇಳಿದಿರುವ ಮಂಗಳೂರು ಸಿಸಿಬಿ ತಂಡಕ್ಕೆ ಖಚಿತ ಸುಳಿವು ದೊರಕಿದ್ದು, ಕಳೆದ ವರುಷ ನಿಗೂಢವಾಗಿ ಸಾವನ್ನಪ್ಪಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ ಸಹಚರರೇ ಕೊಲೆ ಕೃತ್ಯ ಎಸಗಿರೋದಾಗಿ ತಿಳಿದುಬಂದಿದೆ. ಕೊಲೆ ಕೃತ್ಯದಲ್ಲಿ ನೇರ ಪಾಲ್ಗೊಂಡ ಹಂತಕರು ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದು, ಕೃತ್ಯಕ್ಕೆ ಸಹಕರಿಸಿರುವ ಶಂಕೆಯಲ್ಲಿ ಸಿಸಿಬಿ ಪೊಲೀಸರು ಹಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಂಗಳೂರಿನ ಮೀನುಗಾರಿಕಾ ಧಕ್ಕೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದ ಆರಿಫ್ ಶುಕ್ರವಾರ ನಸುಕಿನಲ್ಲಿ ಮಂಗಳೂರಿಗೆ ತನ್ನ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದಾಗ ಇನೋವಾ ಕಾರಿನಲ್ಲಿ ಬೆನ್ನಟ್ಟಿದ್ದ ಹಂತಕರು ಬುಲೆಟ್ ಗೆ ಕಾರನ್ನು ಢಿಕ್ಕಿಪಡಿಸಿದ್ದು, ರಸ್ತೆಗೆಸೆಯಲ್ಪಟ್ಟ ಆರೀಫ್ ಮುಖ, ತಲೆ, ಕತ್ತಿನ ಭಾಗಕ್ಕೆ ಯದ್ವಾತದ್ವಾ ಮಚ್ಚು ಬೀಸಿ ಕೊಲೆ ಮಾಡಿದ್ದರು. ಕೊಲೆ ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಹಂತಕರ ಕಾರು ವಿಟ್ಲದ ಬುಡೋಳಿ ಎಂಬಲ್ಲಿ ಇಂಧನ ಖಾಲಿಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಕೊಲೆಗೆ ಬಳಸಲಾದ ಕೇರಳ ನೋಂದಣಿಯ ಕಾರನ್ನು ಮೂರು ದಿನಗಳ ಹಿಂದಷ್ಟೆ ಹಂತಕರು ಬಾಡಿಗೆಗೆ ಪಡಕೊಂಡಿದ್ದರೆನ್ನಲಾಗಿದೆ. ಉಳ್ಳಾಲದ ವ್ಯಕ್ತಿಯೋರ್ವ ಕಾರನ್ನು ಬಾಡಿಗೆಗೆ ಪಡೆದಿರೋದಾಗಿ ಕಾರು ಮಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾರನ್ನು ಪೊಲೀಸರು ಉಳ್ಳಾಲ ಠಾಣೆಗೆ ತಂದಿದ್ದಾರೆ. ಕೃತ್ಯದಲ್ಲಿ ನೇರ ಭಾಗಿಯಾಗಿರುವ ಆರು ಮಂದಿ ಹಂತಕರು ಮಂಗಳೂರಿನವರೇ ಆಗಿದ್ದು ವಿಟ್ಲದಿಂದ ಬೆಂಗಳೂರಿನ ಕಡೆಗೆ ಪರಾರಿಯಾಗಿರುವ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.




ನೌಫಾಲ್ ಸಾವನ್ನ ಸಂಭ್ರಮಿಸಿದ್ದಕ್ಕೆ ರಿವೇಂಜ್..?
2022 ರಲ್ಲಿ ಆರೀಫ್ ನನ್ನು ಉಚ್ಚಿಲದಲ್ಲಿ ಕೊಲೆ ಮಾಡಲು ಯತ್ನಿಸಿದ್ದ ಫೈಸಲ್ ನಗರದ ನಟೋರಿಯಸ್ ರೌಡಿ ಟೋಪಿ ನೌಫಾಲ್ ತಂಡದಲ್ಲಿದ್ದ ಮೊಹಮ್ಮದ್ ರಿಫಾತ್ ಅಲಿ ಎಂಬಾತ ಕೊಲೆ ಕೃತ್ಯದಲ್ಲಿ ನೇರ ಭಾಗಿಯಾಗಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಕಳೆದ 2025ರ ನವೆಂಬರ್ ತಿಂಗಳಲ್ಲಿ ಟೋಪಿ ನೌಫಾಲ್ ಉಪ್ಪಳ ರೈಲ್ವೇ ಗೇಟ್ ಬಳಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದ. ತನಿಖೆ ನಡೆಸಿದ್ದ ಮಂಜೇಶ್ವರ ಪೊಲೀಸರು ರೈಲು ಢಿಕ್ಕಿ ಹೊಡೆದು ನೌಫಾಲ್ ಸಾವನ್ನಪ್ಪಿರೋದಾಗಿ ವರದಿ ನೀಡಿ ಕೈ ತೊಳೆದು ಬಿಟ್ಟಿದ್ದರು. ನೌಫಾಲ್ ನಂತಹ ಕುಖ್ಯಾತ ರೌಡಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಲು ಹೇಗೆ ಸಾಧ್ಯವೆಂದು ಸಾವಿನ ಬಗ್ಗೆ ಆತನ ಸಹಚರರಲ್ಲಿ ಮನೆ ಮಾಡಿದ್ದ ಅನುಮಾನಗಳು ಮಾತ್ರ ಎಂದಿಗೂ ಮಾಸಿರಲಿಲ್ಲ.
ಕಳೆದ ವಾರ ಈದ್ ಉಲ್ ಫಿತರ್ ಹಬ್ಬದಂದು ಪೈಸಲ್ ನಗರ ಮತ್ತು ವಾಮಂಜೂರಿನ ನೌಫಾಲ್ ಸಹಚರರು ಅಗಲಿದ ಸ್ನೇಹಿತನ ಗೋರಿಯ ಮುಂದೆ ಸೇರಿ ದುವಾ ನೆರವೇರಿಸಿದ್ದರಂತೆ. ಇತ್ತ ತನ್ನನ್ನ ಕೊಲೆಗೆ ಯತ್ನಿಸಿದ್ದ ಟೋಪಿ ನೌಫಾಲನಿಗೆ ನಾಯಿಗಿಂತಲೂ ಹೀನ ಸಾವು ಲಭಿಸಿತೆಂದು ಹೇಳಿಕೊಂಡು ಆರೀಫ್ ಸಂಭ್ರಮಿಸುತ್ತಿರುವುದು ನೌಫಾಲ್ ಸಹಚರರ ಪಿತ್ತ ನೆತ್ತಿಗೇರಿಸುವಂತೆ ಮಾಡಿತ್ತು. ಇದೇ ನೆಪವನ್ನು ಮುಂದಿಟ್ಟು ನೌಫಾಲ್ ಸಹಚರರು ಈದ್ ಹಬ್ಬದಂದು ಸ್ನೇಹಿತನ ಗೋರಿಯ ಮುಂದೆಯೇ ಶಫಥಗೈದು, ಆರೀಫ್ ಹಿಂದೆ ಬಿದ್ದು ಹತ್ಯೆ ನಡೆಸಿರೋದಾಗಿ ಹೇಳಲಾಗಿದೆ. ಇದಕ್ಕೆ ಪುಷ್ಟಿ ಎಂಬಂತೆ ರಿಫಾತ್ ಅಲಿ ಮತ್ತು ಆತನ ಸಹಚರರೇ ಸೇರಿ ತಂದೆಯ ಕೊಲೆ ನಡೆಸಿರುವ ಶಂಕೆ ಇದೆಯೆಂದು ಮೃತ ಆರೀಫ್ ಪುತ್ರ ಅಬ್ದುಲ್ ಖಾದರ್ ಅದೀಫ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ಕೂಡ ನೀಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm