ಬ್ರೇಕಿಂಗ್ ನ್ಯೂಸ್
30-03-26 07:35 pm HK News Desk ಕ್ರೈಂ
ವಿಶಾಖಪಟ್ಟಣ, ಮಾರ್ಚ್ 30: ಆತ ನೌಕಾಪಡೆಯಲ್ಲಿ ಅಧಿಕಾರಿ. ಮದುವೆಯಾಗಿ ಸುಖ ಸಂಸಾರವನ್ನೂ ಹೊಂದಿದ್ದ. ಆದರೆ, ಜೊತೆಗಿದ್ದವಳು ಸಾಕಾಗಲ್ಲ ಅಂತ ಡೇಟಿಂಗ್ ಏಪ್ ನಲ್ಲಿ ಪರಿಚಯವಾದ ಯುವತಿಯೊಂದಿಗೆ ನಂಟು ಬೆಳೆಸಿಕೊಂಡಿದ್ದ. ಪತ್ನಿ ತವರು ಮನೆಗೆ ಹೋದಾಗೆಲ್ಲ ಆಕೆಯನ್ನು ಕರೆದು ರೊಮ್ಯಾನ್ಸ್ ಮಾಡುತ್ತಿದ್ದ.
ಆದರೆ ಪ್ರೀತಿಯ ನೆಪದಲ್ಲಿ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಆ ಯುವತಿಯು ನೌಕಾಪಡೆ ಅಧಿಕಾರಿಯನ್ನೇ ಹಣಕ್ಕಾಗಿ ದಾಳ ಮಾಡಿಕೊಂಡಿದ್ದಳು. ಮೊನ್ನೆ ಯಾವತ್ತಿನಂತೆ, ನೌಕಾಪಡೆ ಅಧಿಕಾರಿ ಚಿಂತಾಡ ರವೀಂದ್ರ, ಪತ್ನಿ ತವರು ಮನೆಗೆ ಹೋದಳೆಂದು ಸಂಜೆ ವೇಳೆಗೆ ತನ್ನ ಲವರ್ ಪೊಲ್ಲಿಪಲ್ಲಿ ಮೌನಿಕಾಳನ್ನು ಮನೆಗೆ ಕರೆಸಿಕೊಂಡಿದ್ದ. ಆದರೆ ಇಬ್ಬರ ನಡುವೆ ಹಣದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಆಕೆಯನ್ನೇ ರವೀಂದ್ರ ಬರ್ಬರವಾಗಿ ಕೊಂದು ಹಾಕಿದ್ದ. ಅಷ್ಟೇ ಅಲ್ಲ, ಆಕೆಯ ದೇಹವವನ್ನು ತುಂಡು ತುಂಡಾಗಿಸಿ ಸೂಟ್ ಕೇಸ್ ನಲ್ಲಿ ಹಾಕಿ ದೂರ ದೂರಕ್ಕೆ ಒಯ್ದು ಎಸೆದು ಬಂದಿದ್ದ.

ಈ ಘಟನೆ ನಡೆದಿರೋದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ. 30 ವರ್ಷದ ರವೀಂದ್ರನಿಗೆ 2024ರಲ್ಲಿ ಬೇರೊಬ್ಬ ಯುವತಿ ಜೊತೆ ಮದುವೆಯಾಗಿದ್ದರೂ 2021ರಿಂದಲೂ ಡೇಟಿಂಗ್ ಏಪ್ ನಲ್ಲಿ ಪರಿಚಯವಾಗಿದ್ದ ಯುವತಿ ಪೊಲ್ಲಿಪಲ್ಲಿ ಮೌನಿಕಾಳೊಂದಿಗೆ ಸಂಬಂಧ ಮುಂದುವರಿದಿತ್ತು. ಇಬ್ಬರು ಕೂಡ ಪಾರ್ಕ್, ಥಿಯೇಟರ್ ಅಂತ ಸುತ್ತಾಡುತ್ತ ಬೇಕಾದಾಗೆಲ್ಲ ದೈಹಿಕ ವಾಂಛೆ ತೀರಿಸಿಕೊಳ್ಳುತ್ತಿದ್ದರು. ಮನೆಗೆ ಪತ್ನಿ ಬಂದಿದ್ದರೂ, ಇವರ ಕದ್ದು ಮುಚ್ಚಿದ ಸಂಬಂಧ ಮುಂದುವರಿದಿತ್ತು.
ಕಳೆದ ಭಾನುವಾರ ಪತ್ನಿ ತವರು ಮನೆಗೆ ಹೋಗಿದ್ದಾಗ ಮೌನಿಕಾಳನ್ನು ರವೀಂದ್ರ ಕರೆದಿದ್ದ. ರೊಮ್ಯಾನ್ಸ್ ಮುಗಿದ ಬಳಿಕ ಆಕೆಗೆ ಹಿಂದೆ ಕೊಟ್ಟಿದ್ದ 3.5 ಲಕ್ಷ ರೂ. ಹಣವನ್ನು ಮರಳಿ ಕೇಳಿದ್ದ. ಆದರೆ ಹಣವನ್ನು ಕೊಡುವುದಿಲ್ಲ, ನೀನು ಹಣಕ್ಕಾಗಿ ಪೀಡಿಸಿದರೆ ನಮ್ಮ ಸಂಬಂಧದ ಬಗ್ಗೆ ನಿನ್ನ ಪತ್ನಿಗೆ ಹೇಳುತ್ತೇನೆ ಎಂದು ಬ್ಲಾಕ್ಮೇಲ್ ಮಾಡಿದ್ದಾಳೆ. ಇಂತಹದ್ದೇ ಬ್ಲಾಕ್ಮೇಲನ್ನು ಹಿಂದೆಯೂ ಮಾಡಿದ್ದಳು. ಇದರಿಂದ ಕೋಪಗೊಂಡ ರವೀಂದ್ರ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದಾನೆ.


ರವೀಂದ್ರ ಬೇರೆ ಯುವತಿಯನ್ನು ಮದುವೆಯಾದ ಬಳಿಕ ಇದೇ ರೀತಿಯಲ್ಲಿ ಬೆದರಿಸುತ್ತ ಹಣ ಕೀಳುವ ಕೃತ್ಯ ಮಾಡುತ್ತಿದ್ದಳು. ಪೊಲೀಸ್ ತನಿಖೆಯಲ್ಲಿ ರವೀಂದ್ರ, ಆಕೆಯನ್ನು ಕೊಲ್ಲಲು ಮೊದಲೇ ಪ್ಲಾನ್ ಮಾಡಿದ್ದ ಎನ್ನುವುದು ತಿಳಿದುಬಂದಿದೆ. ಯುವತಿಯನ್ನು ಉಸಿರುಕಟ್ಟಿಸಿ ಕೊಂದ ಬಳಿಕ ಆನ್ಲೈನಲ್ಲಿ ಚೂರಿಯನ್ನು ತರಿಸಿಕೊಂಡಿದ್ದು ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ತಲೆಯನ್ನು ಕುತ್ತಿಗೆಯಿಂದ ಬೇರ್ಪಡಿಸಿ, ಕಾಲು, ಕೈಗಳನ್ನು ಕತ್ತರಿಸಿ ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಬೇರೆ ಬೇರೆ ಕಡೆ ಎಸೆದಿದ್ದಾನೆ. ದೇಹದ ಒಂದು ಭಾಗವನ್ನು ಫ್ರಿಜ್ ನಲ್ಲಿ ತುಂಬಿಸಿಟ್ಟಿದ್ದಾನೆ.
ತಲೆ ಮತ್ತು ಕೈ ಕಾಲುಗಳನ್ನು ದೂರಕ್ಕೆ ಕೊಂಡೊಯ್ದು ಅಲ್ಲಿ ಅದನ್ನು ಬೆಂಕಿ ಕೊಟ್ಟು ಸುಟ್ಟಿದ್ದ. ಇದರ ನಂತರ ಪಶ್ಚಾತ್ತಾಪಗೊಂಡು, ರವೀಂದ್ರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಕೃತ್ಯದ ಬಗ್ಗೆ ಹೇಳಿ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಆತನ ಮನೆಗೆ ಬಂದು ತನಿಖೆ ನಡೆಸಿದಾಗ ರುಂಡ ರಹಿತ ದೇಹದ ಭಾಗ ಫ್ರಿಜ್ ನಲ್ಲಿರುವುದು ಪತ್ತೆಯಾಗಿದ್ದು ಉಳಿದ ಭಾಗಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
2022ರಲ್ಲಿ ದೆಹಲಿಯಲ್ಲಿ ಲೀವ್ ಇನ್ ರಿಲೇಶನ್ನಲ್ಲಿದ್ದ ಮಹಾರಾಷ್ಟ್ರ ಮೂಲದ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು ಪ್ರಿಯಕರ ಅಫ್ತಾಬ್ ಅಮೀನ್ ಪೂನಾವಾಲ ಎಂಬಾತ ಕಡಿದು ಹತ್ಯೆ ಮಾಡಿದ್ದಲ್ಲದೆ, ದೇಹವನ್ನು 33 ತುಂಡುಗಳನ್ನಾಗಿಸಿ ವಿವಿಧ ಕಡೆಗಳಿಗೆ ಒಯ್ದು ಸುಟ್ಟು ಹಾಕಿದ್ದ. ಈ ಕೃತ್ಯ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ಮತ್ತೊಂದು ಅಮಾನುಷ ಕೃತ್ಯ ಬಯಲಿಗೆ ಬಂದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm