ಬ್ರೇಕಿಂಗ್ ನ್ಯೂಸ್
30-03-26 07:35 pm HK News Desk ಕ್ರೈಂ
ವಿಶಾಖಪಟ್ಟಣ, ಮಾರ್ಚ್ 30: ಆತ ನೌಕಾಪಡೆಯಲ್ಲಿ ಅಧಿಕಾರಿ. ಮದುವೆಯಾಗಿ ಸುಖ ಸಂಸಾರವನ್ನೂ ಹೊಂದಿದ್ದ. ಆದರೆ, ಜೊತೆಗಿದ್ದವಳು ಸಾಕಾಗಲ್ಲ ಅಂತ ಡೇಟಿಂಗ್ ಏಪ್ ನಲ್ಲಿ ಪರಿಚಯವಾದ ಯುವತಿಯೊಂದಿಗೆ ನಂಟು ಬೆಳೆಸಿಕೊಂಡಿದ್ದ. ಪತ್ನಿ ತವರು ಮನೆಗೆ ಹೋದಾಗೆಲ್ಲ ಆಕೆಯನ್ನು ಕರೆದು ರೊಮ್ಯಾನ್ಸ್ ಮಾಡುತ್ತಿದ್ದ.
ಆದರೆ ಪ್ರೀತಿಯ ನೆಪದಲ್ಲಿ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಆ ಯುವತಿಯು ನೌಕಾಪಡೆ ಅಧಿಕಾರಿಯನ್ನೇ ಹಣಕ್ಕಾಗಿ ದಾಳ ಮಾಡಿಕೊಂಡಿದ್ದಳು. ಮೊನ್ನೆ ಯಾವತ್ತಿನಂತೆ, ನೌಕಾಪಡೆ ಅಧಿಕಾರಿ ಚಿಂತಾಡ ರವೀಂದ್ರ, ಪತ್ನಿ ತವರು ಮನೆಗೆ ಹೋದಳೆಂದು ಸಂಜೆ ವೇಳೆಗೆ ತನ್ನ ಲವರ್ ಪೊಲ್ಲಿಪಲ್ಲಿ ಮೌನಿಕಾಳನ್ನು ಮನೆಗೆ ಕರೆಸಿಕೊಂಡಿದ್ದ. ಆದರೆ ಇಬ್ಬರ ನಡುವೆ ಹಣದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಆಕೆಯನ್ನೇ ರವೀಂದ್ರ ಬರ್ಬರವಾಗಿ ಕೊಂದು ಹಾಕಿದ್ದ. ಅಷ್ಟೇ ಅಲ್ಲ, ಆಕೆಯ ದೇಹವವನ್ನು ತುಂಡು ತುಂಡಾಗಿಸಿ ಸೂಟ್ ಕೇಸ್ ನಲ್ಲಿ ಹಾಕಿ ದೂರ ದೂರಕ್ಕೆ ಒಯ್ದು ಎಸೆದು ಬಂದಿದ್ದ.

ಈ ಘಟನೆ ನಡೆದಿರೋದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ. 30 ವರ್ಷದ ರವೀಂದ್ರನಿಗೆ 2024ರಲ್ಲಿ ಬೇರೊಬ್ಬ ಯುವತಿ ಜೊತೆ ಮದುವೆಯಾಗಿದ್ದರೂ 2021ರಿಂದಲೂ ಡೇಟಿಂಗ್ ಏಪ್ ನಲ್ಲಿ ಪರಿಚಯವಾಗಿದ್ದ ಯುವತಿ ಪೊಲ್ಲಿಪಲ್ಲಿ ಮೌನಿಕಾಳೊಂದಿಗೆ ಸಂಬಂಧ ಮುಂದುವರಿದಿತ್ತು. ಇಬ್ಬರು ಕೂಡ ಪಾರ್ಕ್, ಥಿಯೇಟರ್ ಅಂತ ಸುತ್ತಾಡುತ್ತ ಬೇಕಾದಾಗೆಲ್ಲ ದೈಹಿಕ ವಾಂಛೆ ತೀರಿಸಿಕೊಳ್ಳುತ್ತಿದ್ದರು. ಮನೆಗೆ ಪತ್ನಿ ಬಂದಿದ್ದರೂ, ಇವರ ಕದ್ದು ಮುಚ್ಚಿದ ಸಂಬಂಧ ಮುಂದುವರಿದಿತ್ತು.
ಕಳೆದ ಭಾನುವಾರ ಪತ್ನಿ ತವರು ಮನೆಗೆ ಹೋಗಿದ್ದಾಗ ಮೌನಿಕಾಳನ್ನು ರವೀಂದ್ರ ಕರೆದಿದ್ದ. ರೊಮ್ಯಾನ್ಸ್ ಮುಗಿದ ಬಳಿಕ ಆಕೆಗೆ ಹಿಂದೆ ಕೊಟ್ಟಿದ್ದ 3.5 ಲಕ್ಷ ರೂ. ಹಣವನ್ನು ಮರಳಿ ಕೇಳಿದ್ದ. ಆದರೆ ಹಣವನ್ನು ಕೊಡುವುದಿಲ್ಲ, ನೀನು ಹಣಕ್ಕಾಗಿ ಪೀಡಿಸಿದರೆ ನಮ್ಮ ಸಂಬಂಧದ ಬಗ್ಗೆ ನಿನ್ನ ಪತ್ನಿಗೆ ಹೇಳುತ್ತೇನೆ ಎಂದು ಬ್ಲಾಕ್ಮೇಲ್ ಮಾಡಿದ್ದಾಳೆ. ಇಂತಹದ್ದೇ ಬ್ಲಾಕ್ಮೇಲನ್ನು ಹಿಂದೆಯೂ ಮಾಡಿದ್ದಳು. ಇದರಿಂದ ಕೋಪಗೊಂಡ ರವೀಂದ್ರ ಆಕೆಯನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದಾನೆ.


ರವೀಂದ್ರ ಬೇರೆ ಯುವತಿಯನ್ನು ಮದುವೆಯಾದ ಬಳಿಕ ಇದೇ ರೀತಿಯಲ್ಲಿ ಬೆದರಿಸುತ್ತ ಹಣ ಕೀಳುವ ಕೃತ್ಯ ಮಾಡುತ್ತಿದ್ದಳು. ಪೊಲೀಸ್ ತನಿಖೆಯಲ್ಲಿ ರವೀಂದ್ರ, ಆಕೆಯನ್ನು ಕೊಲ್ಲಲು ಮೊದಲೇ ಪ್ಲಾನ್ ಮಾಡಿದ್ದ ಎನ್ನುವುದು ತಿಳಿದುಬಂದಿದೆ. ಯುವತಿಯನ್ನು ಉಸಿರುಕಟ್ಟಿಸಿ ಕೊಂದ ಬಳಿಕ ಆನ್ಲೈನಲ್ಲಿ ಚೂರಿಯನ್ನು ತರಿಸಿಕೊಂಡಿದ್ದು ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ತಲೆಯನ್ನು ಕುತ್ತಿಗೆಯಿಂದ ಬೇರ್ಪಡಿಸಿ, ಕಾಲು, ಕೈಗಳನ್ನು ಕತ್ತರಿಸಿ ಟ್ರಾಲಿ ಬ್ಯಾಗ್ ನಲ್ಲಿ ತುಂಬಿಸಿ ಬೇರೆ ಬೇರೆ ಕಡೆ ಎಸೆದಿದ್ದಾನೆ. ದೇಹದ ಒಂದು ಭಾಗವನ್ನು ಫ್ರಿಜ್ ನಲ್ಲಿ ತುಂಬಿಸಿಟ್ಟಿದ್ದಾನೆ.
ತಲೆ ಮತ್ತು ಕೈ ಕಾಲುಗಳನ್ನು ದೂರಕ್ಕೆ ಕೊಂಡೊಯ್ದು ಅಲ್ಲಿ ಅದನ್ನು ಬೆಂಕಿ ಕೊಟ್ಟು ಸುಟ್ಟಿದ್ದ. ಇದರ ನಂತರ ಪಶ್ಚಾತ್ತಾಪಗೊಂಡು, ರವೀಂದ್ರ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಕೃತ್ಯದ ಬಗ್ಗೆ ಹೇಳಿ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ಆತನ ಮನೆಗೆ ಬಂದು ತನಿಖೆ ನಡೆಸಿದಾಗ ರುಂಡ ರಹಿತ ದೇಹದ ಭಾಗ ಫ್ರಿಜ್ ನಲ್ಲಿರುವುದು ಪತ್ತೆಯಾಗಿದ್ದು ಉಳಿದ ಭಾಗಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
2022ರಲ್ಲಿ ದೆಹಲಿಯಲ್ಲಿ ಲೀವ್ ಇನ್ ರಿಲೇಶನ್ನಲ್ಲಿದ್ದ ಮಹಾರಾಷ್ಟ್ರ ಮೂಲದ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು ಪ್ರಿಯಕರ ಅಫ್ತಾಬ್ ಅಮೀನ್ ಪೂನಾವಾಲ ಎಂಬಾತ ಕಡಿದು ಹತ್ಯೆ ಮಾಡಿದ್ದಲ್ಲದೆ, ದೇಹವನ್ನು 33 ತುಂಡುಗಳನ್ನಾಗಿಸಿ ವಿವಿಧ ಕಡೆಗಳಿಗೆ ಒಯ್ದು ಸುಟ್ಟು ಹಾಕಿದ್ದ. ಈ ಕೃತ್ಯ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ಮತ್ತೊಂದು ಅಮಾನುಷ ಕೃತ್ಯ ಬಯಲಿಗೆ ಬಂದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm