ಬ್ರೇಕಿಂಗ್ ನ್ಯೂಸ್
31-03-26 11:11 am HK News Staffer ಕ್ರೈಂ
ಬೆಂಗಳೂರು, ಮಾರ್ಚ್ 31: 'ಆಪರೇಷನ್ ಶುದ್ಧೀಕರಣ' ಹೆಸರಿನಲ್ಲಿ ಜೈಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಶತಪ್ರಯತ್ನಗಳು ನಡೆಯುತ್ತಿದ್ದರೂ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಿಂತಿಲ್ಲ. ಜತೆಗೆ, ಜೈಲಿಗೆ ಡ್ರಗ್ಸ್, ಮೊಬೈಲ್ ಸರಬರಾಜು ಯತ್ನ ಮುಂದುವರಿದಿದೆ.
ಈ ನಡುವೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾ ಕೈದಿಯಾಗಿರುವ ಗಂಡನಿಗೆ ಮೂರು 5ಜಿ ಸಿಮ್, ಡ್ರಗ್ಸ್ ಹಾಗೂ ತಂಬಾಕು ಉತ್ಪನ್ನಗಳೊಂದಿಗೆ ಬಂದಿದ್ದ ಮಹಿಳೆ ಸಿಕ್ಕಿಬಿದ್ದು ಅದೇ ಜೈಲು ಸೇರಿದ್ದಾಳೆ. ಹೆಣ್ಣೂರಿನ ರಿತಿಕಾ ರೇ (27) ಬಂಧಿತೆ.
ಅಸ್ಸಾಂ ಮೂಲದ ರಿತಿಕಾ, ಹೆಣ್ಣೂರಿನ ಫರ್ಹಾನ್ ಖಾನ್ನನ್ನು ಎರಡನೇ ಮದುವೆಯಾಗಿದ್ಲು. ಕೆಲ ತಿಂಗಳ ಹಿಂದೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಫರ್ಹಾನ್ ಜೈಲು ಸೇರಿದ್ದ.
ಮಾ.26ರಂದು ಗಂಡ ಫರ್ಹಾನ್ನನ್ನು ನೋಡಲು ಪಾಸು ಪಡೆದು ರಿತಿಕಾ ಆಗಮಿಸಿದ್ದರು. ಜೈಲಿನ ಪ್ರವೇಶ ದ್ವಾರದಲ್ಲಿ ರಿತಿಕಾ ನಡವಳಿಕೆ ಅನುಮಾನಾಸ್ಪದವಾಗಿತ್ತು. ಹೀಗಾಗಿ, ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ರಿತಿಕಾಳನ್ನ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು. ಈ ವೇಳೆ ರಿತಿಕಾ ತನ್ನ ದೇಹದ ಖಾಸಗಿ ಭಾಗದಲ್ಲಿ ಮೂರು ಸಿಮ್, 27 ಗ್ರಾಂ ಮೆಥಾಂಫೆಟಮೈನ್ ಡ್ರಗ್ಸ್ ಪುಡಿ, ಬೀಡಿ ಹಾಗೂ ತಂಬಾಕು ಉತ್ಪನ್ನವನ್ನು ಕವರ್ನಲ್ಲಿ ಬಚ್ಚಿಟ್ಟುಕೊಂಡಿರುವುದು ಕಂಡು ಬಂದಿತ್ತು. ಹೀಗಾಗಿ, ತಕ್ಷಣ ಜೈಲು ಸಿಬ್ಬಂದಿ ವಶಕ್ಕೆ ರಿತಿಕಾಳನ್ನ ಒಪ್ಪಿಸಿದ್ದರು.
ಜೈಲು ಅಧಿಕಾರಿಗಳು ನೀಡಿದ ದೂರಿನನ್ವಯ ಎನ್ಡಿಪಿಎಸ್ ಹಾಗೂ ಜೈಲು ನಿಯಮಗಳ ಉಲ್ಲಂಘನೆ ಆರೋಪದನ್ವಯ ಪ್ರಕರಣ ದಾಖಲಿಸಿ ರಿತಿಕಾಳನ್ನ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದರು. 'ನನಗೆ ಏನೂ ಗೊತ್ತಿಲ್ಲ. ಗಂಡನಿಗೆ ಕೊಡಲು ಬಂದಿದ್ದೆ' ಎಂದಷ್ಟೇ ವಿಚಾರಣೆ ವೇಳೆ ತಿಳಿಸಿದ್ದಾರೆ.
ಜೈಲಿನಲ್ಲಿರುವ ಫರ್ಹಾನ್ ಖಾನ್ ಸೂಚನೆ ಮೇರೆಗೆ ರಿತಿಕಾ ಡ್ರಗ್ಸ್ ಪೂರೈಕೆಗೆ ಯತ್ನಿಸಿರುವುದು ಗೊತ್ತಾಗಿದೆ. ರಿತಿಕಾಗೆ ಹೊರಗಡೆ ಯಾರು ಡ್ರಗ್ಸ್ ನೀಡಿದ್ದರು, ಫರ್ಹಾನ್ ಜತೆ ಸಂಪರ್ಕದಲ್ಲಿ ಇರುವವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿ ಫರ್ಹಾನ್ನನ್ನು ನ್ಯಾಯಾಲಯದ ಅನುಮತಿ ಪಡೆದು ಕಸ್ಟಡಿಗೆ ಪಡೆಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
4 ವರ್ಷದ ಮಗುವೂ ಜೈಲಿಗೆ;
ಆರೋಪಿ ರಿತಿಕಾ, ಗಂಡನನ್ನು ನೋಡಲು ತನ್ನ 4 ವರ್ಷದ ಮಗುವಿನ ಜತೆ ಬಂದಿದ್ದಳು. ಆದರೆ, ಡ್ರಗ್ಸ್ ಪೂರೈಕೆ ಯತ್ನದಲ್ಲಿ ಸಿಕ್ಕಿಬಿದ್ದಿದ್ದಾರೆ. ಮಗುವನ್ನು ಆರೈಕೆ ಮಾಡಲು ಹೊರಗಡೆ ಅವರಿಗೆ ಸಂಬಂಧಿಕರು ಇಲ್ಲ. ಹೀಗಾಗಿ, ಕಾನೂನು ರೀತ್ಯ ತಾಯಿಯ ಜತೆ ಮಗುವನ್ನು ಜೈಲಿಗೆ ಕಳಿಸಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am