ಬ್ರೇಕಿಂಗ್ ನ್ಯೂಸ್
03-04-26 11:00 pm HK News Staffer ಕ್ರೈಂ
ಹೈದರಾಬಾದ್, ಏಪ್ರಿಲ್ 3 : ತೆಲಂಗಾಣದ ಹನ್ಮಕೊಂಡ ಜಿಲ್ಲೆ, ಐನವೋಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪತಿಯೋರ್ವ ಗರ್ಭಿಣಿ ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ಪತ್ನಿಯ ಕುಟುಂಬಸ್ಥರ ಅನುಮಾನದಿಂದ ಇದೀಗ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಫರ್ಹತ್ ಮತ್ತು ಆಕೆಯ ಇಬ್ಬರು ಮಕ್ಕಳಾದ ಉಮೇರಾ (8), ಆಯೇಷಾ (6) ಮೃತ ದುರ್ದೈವಿಗಳು. ಆರೋಪಿ ಅಜರುದ್ದೀನ್ಗೆ ಈ ಮೊದಲು ಉಮೇರಾ ಹಾಗೂ ಆಯೇಷಾ ಹೆಸರಿನ ಇಬ್ಬರು ಹೆಣ್ಣು ಮಕ್ಕಳಿದ್ದು ಪತ್ನಿ ಫರ್ಹತ್ ಮೂರನೇ ಭಾರಿಗೆ ಗರ್ಭಿಣಿಯಾಗಿದ್ದಳು. ಆದರೆ ಈ ಬಾರಿಯೂ ಪತ್ನಿಗೆ ಹೆಣ್ಣು ಮಗುವಾಗುತ್ತದೆ ಎಂಬ ಭಯದಿಂದ ಆತಂಕಗೊಂಡಿದ್ದ ಅಜರುದ್ದೀನ್ ಫರ್ಹತ್ಗೆ ಗರ್ಭಪಾತ ಮಾಡಲು ಒತ್ತಾಯಿಸಿದ್ದ. ಆದರೆ ಇದಕ್ಕೆ ಪತ್ನಿ ಒಪ್ಪಿರಲಿಲ್ಲ.
ಹೆಂಡತಿಯ ಈ ನಿರ್ಧಾರದಿಂದ ಅಜರುದ್ದೀನ್ ಕೋಪಗೊಂಡಿದ್ದ. ಹೀಗಾಗಿ ವಾರಂಗಲ್-ಖಮ್ಮಮ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತಾನು ಕೆಲಸ ಮಾಡುತ್ತಿದ್ದ ಈಜು ಕೊಳಕ್ಕೆ ಹೆಂಡತಿ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿದ್ದ. ಬಳಿಕ ಮೂವರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನು ನಂಬಿಸಿದ್ದ. ಆದರೆ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಪೊಲೀಸರು ಅಜರುದ್ದೀನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ಕೃತ್ಯ ಬೆಳಕಿಗೆ ಬಂದಿದೆ.
ಇದೇ ರೀತಿ ಈ ಹಿಂದೆಯೂ ಎರಡು ಬಾರಿ ಪತ್ನಿಗೆ ಹೆಣ್ಣು ಮಗುವಾಗುವ ಭಯದಿಂದ ಅಜರುದ್ದೀನ್ ಗರ್ಭಪಾತ ಮಾಡಿಸಿದ್ದ. ಅದಾದ 4 ವರ್ಷಗಳ ನಂತರ ಆಕೆ ಮತ್ತೆ ಗರ್ಭಿಣಿಯಾಗಿದ್ದರು. ಆದರೆ ಈ ಬಾರಿಯೂ ಪತ್ನಿಗೆ ಹೆಣ್ಣು ಮಗುವೇ ಆಗುತ್ತದೆ ಎಂದು ಅನಿಸತೊಡಗಿತ್ತು. ಹೀಗಾಗಿ ಗರ್ಭಪಾತಕ್ಕೆ ಒತ್ತಾಯಿಸಿದ್ದು ಪತ್ನಿ ಒಪ್ಪದೇ ಇದ್ದುದಕ್ಕೆ ಅಜರುದ್ದೀನ್ ಭೀಕರ ಕೃತ್ಯ ಎಸಗಿದ್ದು ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm