ಬ್ರೇಕಿಂಗ್ ನ್ಯೂಸ್
04-04-26 11:32 am HK News Staffer ಕ್ರೈಂ
ಮಂಗಳೂರು, ಎಪ್ರಿಲ್ 4: ಮಂಗಳೂರಿನಲ್ಲಿ ಸೀ ಬ್ರೀಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಬೆಳಗ್ಗೆ ಸೀ ಬ್ರೀಜ್ ಹೆಸರಲ್ಲಿ ಮ್ಯಾರಥಾನ್ ಇದೆಯೆಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. 5 ಕಿಮೀ ಓಟಕ್ಕೆ 5 ಲಕ್ಷ ಬಹುಮಾನ, 10 ಕಿಮೀಗೆ 3.5 ಲಕ್ಷದ ಆಫರ್ ನೀಡಿದ್ದು 21 ಕಿಮೀ ಓಟಕ್ಕೆ 5 ಲಕ್ಷದ ಬಹುಮಾನ ಆಫರ್ ನೀಡಿರುವ ಬಗ್ಗೆ ತಿಳಿಸಲಾಗಿದೆ. ಮ್ಯಾರಥಾನಲ್ಲಿ ಪಾಲ್ಗೊಳ್ಳಲು ಮೊದಲೇ ರಿಜಿಸ್ಟರ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ಮಂಗಳೂರಿನಲ್ಲಿ ಅಂತಹ ಯಾವುದೇ ಮ್ಯಾರಥಾನ್ ಆಯೋಜಿಸಿರುವುದು ನಡೆದಿಲ್ಲ.
ಹೀಗಾಗಿ ಜಾಲತಾಣದಲ್ಲಿ ಫೇಕ್ ಪೋಸ್ಟರ್ ಕೊಟ್ಟು ಸೈಬರ್ ವಂಚನೆಗೆ ಗಾಳ ಹಾಕಿರುವ ಶಂಕೆಯಿದ್ದು ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ ಹಣ ಕಳಕೊಳ್ತೀರಾ..! ಜಾಗ್ರತೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ. ಫೇಕ್ ಪೋಸ್ಟರ್ ಹಾಕಿ ಮೊಬೈಲ್ ಹ್ಯಾಕ್ ಮಾಡಿ ಹಣ ಕೀಳುವ ಪೋಸ್ಟರ್ ಇದೆಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸದ್ಯ, ಮಂಗಳೂರಿನಲ್ಲಿ ಬಿಗ್ ಮ್ಯಾರಥಾನ್ ಇದೆಯೆಂಬ ಹೆಸರಲ್ಲಿ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಅದೇ ಮಾದರಿಯ ವಿಡಿಯೋ ಒಂದನ್ನು ಹರಿಯಬಿಡಲಾಗಿದ್ದು ಅದಕ್ಕೆ ಕಾಂತಾರ ಸಿನಿಮಾದ ಸಾಂಗನ್ನು ಹಿನ್ನೆಲೆಯಲ್ಲಿ ತೋರಿಸಿ ಕರಾವಳಿ ಜನರನ್ನು ಸತ್ಯವೆಂದು ನಂಬಿಸಿ ಯಾಮಾರಿಸುವ ರೀತಿ ಬಿಂಬಿಸಲಾಗಿದೆ. ಸೈಬರ್ ವಂಚಕರು ಈ ರೀತಿಯೂ ಜಾಲ ಬೀಸುತ್ತಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಅದರಲ್ಲಿ ಕೊಟ್ಟಿರುವ ನಂಬರಿಗೆ ಫೋನಾಯಿಸಿದರೆ ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ ಕರೆ ಸ್ವೀಕರಿಸುತ್ತಿದ್ದು ರಿಜಿಸ್ಟರ್ ಮಾಡಿಕೊಳ್ಳಲು ಹೇಳುತ್ತಾನೆ. ಆದರೆ ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗುವ ಸಾಧ್ಯತೆ ಇದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm