ಬ್ರೇಕಿಂಗ್ ನ್ಯೂಸ್
04-04-26 11:32 am HK News Staffer ಕ್ರೈಂ
ಮಂಗಳೂರು, ಎಪ್ರಿಲ್ 4: ಮಂಗಳೂರಿನಲ್ಲಿ ಸೀ ಬ್ರೀಜ್ ಮ್ಯಾರಥಾನ್ ಇದೆಯೆಂಬ ಹೆಸರಿನಲ್ಲಿ ನಕಲಿ ಪೋಸ್ಟ್ ಒಂದನ್ನು ಜಾಲತಾಣದಲ್ಲಿ ಹರಿಯ ಬಿಡಲಾಗಿದ್ದು ಸೈಬರ್ ವಂಚಕರದ್ದೇ ಜಾಲ ಎನ್ನುವ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಬೆಳಗ್ಗೆ ಸೀ ಬ್ರೀಜ್ ಹೆಸರಲ್ಲಿ ಮ್ಯಾರಥಾನ್ ಇದೆಯೆಂದು ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ. 5 ಕಿಮೀ ಓಟಕ್ಕೆ 5 ಲಕ್ಷ ಬಹುಮಾನ, 10 ಕಿಮೀಗೆ 3.5 ಲಕ್ಷದ ಆಫರ್ ನೀಡಿದ್ದು 21 ಕಿಮೀ ಓಟಕ್ಕೆ 5 ಲಕ್ಷದ ಬಹುಮಾನ ಆಫರ್ ನೀಡಿರುವ ಬಗ್ಗೆ ತಿಳಿಸಲಾಗಿದೆ. ಮ್ಯಾರಥಾನಲ್ಲಿ ಪಾಲ್ಗೊಳ್ಳಲು ಮೊದಲೇ ರಿಜಿಸ್ಟರ್ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ. ಆದರೆ ಮಂಗಳೂರಿನಲ್ಲಿ ಅಂತಹ ಯಾವುದೇ ಮ್ಯಾರಥಾನ್ ಆಯೋಜಿಸಿರುವುದು ನಡೆದಿಲ್ಲ.
ಹೀಗಾಗಿ ಜಾಲತಾಣದಲ್ಲಿ ಫೇಕ್ ಪೋಸ್ಟರ್ ಕೊಟ್ಟು ಸೈಬರ್ ವಂಚನೆಗೆ ಗಾಳ ಹಾಕಿರುವ ಶಂಕೆಯಿದ್ದು ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗಿ ಹಣ ಕಳಕೊಳ್ತೀರಾ..! ಜಾಗ್ರತೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ. ಫೇಕ್ ಪೋಸ್ಟರ್ ಹಾಕಿ ಮೊಬೈಲ್ ಹ್ಯಾಕ್ ಮಾಡಿ ಹಣ ಕೀಳುವ ಪೋಸ್ಟರ್ ಇದೆಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಸದ್ಯ, ಮಂಗಳೂರಿನಲ್ಲಿ ಬಿಗ್ ಮ್ಯಾರಥಾನ್ ಇದೆಯೆಂಬ ಹೆಸರಲ್ಲಿ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಅದೇ ಮಾದರಿಯ ವಿಡಿಯೋ ಒಂದನ್ನು ಹರಿಯಬಿಡಲಾಗಿದ್ದು ಅದಕ್ಕೆ ಕಾಂತಾರ ಸಿನಿಮಾದ ಸಾಂಗನ್ನು ಹಿನ್ನೆಲೆಯಲ್ಲಿ ತೋರಿಸಿ ಕರಾವಳಿ ಜನರನ್ನು ಸತ್ಯವೆಂದು ನಂಬಿಸಿ ಯಾಮಾರಿಸುವ ರೀತಿ ಬಿಂಬಿಸಲಾಗಿದೆ. ಸೈಬರ್ ವಂಚಕರು ಈ ರೀತಿಯೂ ಜಾಲ ಬೀಸುತ್ತಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಅದರಲ್ಲಿ ಕೊಟ್ಟಿರುವ ನಂಬರಿಗೆ ಫೋನಾಯಿಸಿದರೆ ಹಿಂದಿಯಲ್ಲಿ ಮಾತನಾಡುವ ವ್ಯಕ್ತಿ ಕರೆ ಸ್ವೀಕರಿಸುತ್ತಿದ್ದು ರಿಜಿಸ್ಟರ್ ಮಾಡಿಕೊಳ್ಳಲು ಹೇಳುತ್ತಾನೆ. ಆದರೆ ರಿಜಿಸ್ಟರ್ ಮಾಡಿದರೆ ಮೊಬೈಲ್ ಹ್ಯಾಕ್ ಆಗುವ ಸಾಧ್ಯತೆ ಇದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm