ಬ್ರೇಕಿಂಗ್ ನ್ಯೂಸ್
04-04-26 05:42 pm HK News Staffer ಕ್ರೈಂ
ನಾಸಿಕ್, ಏಪ್ರಿಲ್ 4: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದರ್ಗುಡೆ ಕುಟುಂಬ, ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮಾರುತಿ XL6 ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಬಾವಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ (13) ಮತ್ತು ಸುನಿಲ್ ದತ್ತು ದರ್ಗುಡೆ (32) ಮೃತಪಟ್ಟಿದ್ದಾರೆ. ಮೃತರೆಲ್ಲರೂ ದಿಂಡೋರಿ ತಾಲೂಕಿನ ಇಂದೋರ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಆರಂಭಿಸಿವೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡವೂ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದೆ. ಆದರೆ ಸ್ಥಳದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ತಡರಾತ್ರಿ ವರೆಗೆ ರಕ್ಷಣಾ ಕಾರ್ಯಗಳು ಮುಂದುವರಿದಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಕಾರು ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಿಂಡೋರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm