ಬ್ರೇಕಿಂಗ್ ನ್ಯೂಸ್
06-04-26 02:34 pm HK News Staffer ಕ್ರೈಂ
ಬೆಳಗಾವಿ, ಏ 06: ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ(36) ಮೃತ ದಂಪತಿಗಳು. ಮಧುರಾ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಮಧುರಾ ಕೊನೆಯುಸಿರೆಳೆದಿದ್ದಾರೆ.
ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ರಸ್ತೆ ದಾಟುವಾಗ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಧುರಾ ಮತ್ತು ಕರೆಪ್ಪ ದಂಪತಿ ಮದುವೆ ಆಗಿ 9 ವರ್ಷ ಆಗಿತ್ತು. ಇವರಿಗೆ ಒಂದು ಹೆಣ್ಣು, ಎರಡು ಗಂಡು ಮಕ್ಕಳಿದ್ದಾರೆ. ಈಗ ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡು ಮೂವರು ಮಕ್ಕಳು ಅನಾಥರಾಗಿದ್ದಾರೆ. ದೇವರು ಈ ಕುಟುಂಬಕ್ಕೆ ಅನ್ಯಾಯ ಮಾಡಿದ ಅಂತಾ ಗ್ರಾಮಸ್ಥರು ಮಮ್ಮಲ ಮರಗುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm