ಬ್ರೇಕಿಂಗ್ ನ್ಯೂಸ್
08-04-26 04:29 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸ್ಪ್ರೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ.
ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು.
ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು.
ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು, ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟ ಆಡುವ ರೀತಿ ಚಾಲಕರು ವರ್ತಿಸುತ್ತಿದ್ದಾರೆ. ಟೈಮ್ ಕೀಪಿಂಗ್ ಹೆಸರಲ್ಲಿ ಬಸ್ಸುಗಳ ಧಾವಂತಕ್ಕೆ ರಸ್ತೆಯಲ್ಲಿರುವ ಇತರೇ ವಾಹನಗಳು ಸೈಡ್ ಬಿಟ್ಟು ಕೊಡಲೇಬೇಕಾದ ಸ್ಥಿತಿಗೆ ಬರುತ್ತವೆ. ಈ ಧಾವಂತದಿಂದಾಗಿಯೇ ಈ ಅಪಘಾತ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm