ಬ್ರೇಕಿಂಗ್ ನ್ಯೂಸ್
09-04-26 01:03 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 9: ಸಿಲಿಕಾನ್ ಸಿಟಿಯಲ್ಲಿ ಪೋಷಕರ ಎದೆನಡುಗಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಯಂಡಹಳ್ಳಿಯಲ್ಲಿ ವಾಸವಾಗಿರುವ ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ, ಏಪ್ರಿಲ್ 6ರಂದು ಮನೆಯೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮೊದಲ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದು ಘಟನೆ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿದೆ.
ಮನೆಯೊಳಗೆ ಆಟವಾಡುತ್ತಿದ್ದ ಮಗ ಮನೆಯ ಮುಖ್ಯ ಬಾಗಿಲು ದಾಟಿ ಹೊರಬಂದಿದ್ದು, ವರಾಂಡದಲ್ಲಿ ಇಟ್ಟಿದ್ದ ಕುರ್ಚಿಯ ಮೇಲೆ ಹತ್ತಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದೆ. ಮಗು ನೆಲಕ್ಕಪ್ಪಳಿಸುತ್ತಿದ್ದಂತೆಯೇ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿರುವ ದೃಶ್ಯ ಕಂಡ ತಾಯಿ ಜಯಶ್ರೀ ಆಘಾತದಿಂದಲೇ ರಸ್ತೆಯಲ್ಲೇ ಮೂರ್ಛೆ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ತಾಯಿ ಹಾಗೂ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಮಗುವಿಗೆ ಬಸವನಗುಡಿಯ ರಂಗದೊರೈ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು ಮಗುವಿನ ಸ್ಥಿತಿ ಸುಧಾರಿಸುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿಗೆ ಸಹನಾ ಒಬ್ಬಳೆ ಮಗಳು. ಪ್ರಸ್ತುತ ಮಗುವಿನ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ.
ಘಟನೆಯ ಬಗ್ಗೆ ಮಾತನಾಡಿದ ಮಗುವಿನ ತಂದೆ ನವೀನ್, “ಇದು ಸಂಪೂರ್ಣ ಆಕಸ್ಮಿಕ ಘಟನೆ. , 'ಮನೆಯ ಮೊದಲನೇ ಮಹಡಿಯಿಂದ ಮಗು ಆಯತಪ್ಪಿ ಕೆಳಕ್ಕೆ ಬಿದ್ದಿದೆ. ಪತ್ನಿ ಅಡುಗೆಮನೆಯಲ್ಲಿ ಹಾಲು ಕಾಯಿಸುತ್ತಿದ್ದ ವೇಳೆ ಕೆಲವೇ ಕ್ಷಣಗಳಲ್ಲಿ ಇದು ಸಂಭವಿಸಿದೆ. ಮಗುವಿನ ತಲೆಗೆ ಮೂರು ಹೊಲಿಗೆಗಳನ್ನು ಹಾಕಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಗು ಈಗ ಪ್ರಾಣಾಪಾಯದಿಂದ ಪಾರಾಗಿದೆ” ಎಂದು ವೈದ್ಯರು ಹೇಳಿದ್ದಾಗಿ ತಿಳಿಸಿದ್ದಾರೆ.
ಈ ಘಟನೆ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಜಾಗೃತಿ ಮೂಡಿಸಿದೆ.
Could This Have Been Prevented? Questions Raised Over Parental Supervision
— Karnataka Portfolio (@karnatakaportf) April 9, 2026
A deeply distressing incident has occurred in the Nayandahalli area of Bengaluru. A one-and-a-half-year-old baby girl, who was playing at home, accidentally stepped out through the main door and fell from… pic.twitter.com/8DAJMg3Mnm
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm