ಬ್ರೇಕಿಂಗ್ ನ್ಯೂಸ್
10-04-26 11:06 pm HK News Staffer ಕ್ರೈಂ
ಲಕ್ನೋ, ಎಪ್ರಿಲ್ 10: ಪ್ರಯಾಗ್ರಾಜ್ ಕುಂಭಮೇಳದಲ್ಲಿ ಮಾಲೆ ಮಾರುತ್ತಲೇ ಸೋಶಿಯಲ್ ಮೀಡಿಯಾದಿಂದಾಗಿ ರಾತ್ರೋರಾತ್ರಿ ಖ್ಯಾತಿ ಗಳಿಸಿದ್ದ ಉತ್ತರ ಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರು ಇತ್ತೀಚೆಗೆ ಕೇರಳದಲ್ಲಿ ನಟ ಫರ್ಮನ್ ಖಾನ್ ಎಂಬವರನ್ನು ಮದುವೆಯಾಗಿದ್ದರು. ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಅಂತರ್ಧರ್ಮೀಯ ವಿವಾಹ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.
ಪೊಲೀಸರ ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ವಿವಾಹಕ್ಕೆ ಸಂಬಂಧಿಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿ ಫರ್ಮಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯ ನಂತರ, ಮೊನಾಲಿಸಾ ಮದುವೆ ಸಮಯದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ದೃಢಪಟ್ಟಿದೆ. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿದವು. ಆಕೆಯ ಹೆತ್ತವರು ತಮ್ಮ ಅಪ್ರಾಪ್ತ ಮಗಳ ತಲೆಕೆಡಿಸಿ ಫರ್ಮಾನ್ ಮದುವೆಯಾಗಿದ್ದಾಗಿ ಆರೋಪಿಸಿ ದೂರನ್ನೂ ನೀಡಿದ್ದರು. ಇದನ್ನೇ ಆಧಾರವಾಗಿಟ್ಟು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ತನಿಖೆ ನಡೆಸಿತ್ತು.
ಆಸ್ಪತ್ರೆ ದಾಖಲೆಗಳ ಪ್ರಕಾರ, ಮೋನಾಲಿಸಾ ಪಾರಧಿ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಡಿಸೆಂಬರ್ 30, 2009 ರಂದು ಜನಿಸಿದ್ದಾರೆ. ಮಾರ್ಚ್ 11, 2026 ರಂದು ಮದುವೆಯಾದ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ ತುಂಬಿತ್ತು. ಕೇರಳದಲ್ಲಿ ಮದುವೆ ನೋಂದಣಿ ಮಾಡುವಾಗ ಮೊನಾಲಿಸಾ ಅವರನ್ನು ವಯಸ್ಕಳೆಂದು ತೋರಿಸಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಲಾಗಿದೆ. ಆಕೆಯನ್ನು 18 ವರ್ಷ ಮೇಲ್ಪಟ್ಟವಳೆಂದು ಬಿಂಬಿಸಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm