ಬ್ರೇಕಿಂಗ್ ನ್ಯೂಸ್
11-04-26 12:04 pm HK News Desk ಕ್ರೈಂ
ಹುಬ್ಬಳ್ಳಿ, ಎಪ್ರಿಲ್ 11: ಧಾರವಾಡ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಅವರನ್ನು ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ.
ಈ ಹಿಂದೆ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಬಳಿಕ ಯುವ ಕಾಂಗ್ರೆಸ್ನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ ಅವರು ತಮ್ಮ ಮನೆಯಲ್ಲಿದ್ದ ಸಂದರ್ಭದಲ್ಲಿ ಮಾರಕಾಸ್ತ್ರಗಳೊಂದಿಗೆ ನುಗ್ಗಿದ ಆರು ಮಂದಿಯ ತಂಡವು ಮನೆಯವರ ಎದುರಲ್ಲೇ ಕೊಲೆ ಕೃತ್ಯವೆಸಗಿದೆ. ಏಕಾಏಕಿ ದಾಳಿ ಮಾಡಿದ ಆರೋಪಿಗಳು, ತಡೆಯಲು ಬಂದ ಮನೆಯವರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಉಪ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ದುಷ್ಕರ್ಮಿಗಳ ಮಾಹಿತಿ ಕಲೆಹಾಕಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆಯಲ್ಲಿ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾದ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ಮೊಹಮ್ಮದ್ ಶಾ, ಸದ್ದಾಂ, ಗೌಸ್ ಮತ್ತು ಪರ್ವೇಜ್ ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿಯೇ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಇದೇ ಎಪ್ರಿಲ್ 26ರಂದು ಫೈರೋಜ್ ಮದುವೆ ನಿಗದಿಯಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm