ಬ್ರೇಕಿಂಗ್ ನ್ಯೂಸ್
15-04-26 11:40 pm HK News Desk ಕ್ರೈಂ
ಬೆಂಗಳೂರು, ಏ 15: ಇಡೀ ರಾಜ್ಯವೇ ಎದುರು ನೋಡುತ್ತಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಕೊನೆಗೂ ಪ್ರಕಟವಾಗಿದೆ. ಸುದೀರ್ಘ ಕಾನೂನಿನ ಹೋರಾಟದ ನಂತರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ಸಿಬಿಐ ಅಧಿಕಾರಿಗಳಿಗೆ ಸೂಚನೆ ನೀಡಿದೆ.
2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.
ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ.
ನಿಮ್ಮ ಹಣ, ಅಧಿಕಾರ ಯಾವತ್ತೂ ಶಾಶ್ವತ ಅಲ್ಲಾ. ಇಂದು ನ್ಯಾಯ ಗೆದ್ದಿದೆ. ನಮ್ಮ ತಮ್ಮನ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಯೋಗೇಶ್ ಗೌಡ ಪರ ತೀರ್ಪು ಖುಷಿ ಕೊಟ್ಟಿದೆ. ಇಷ್ಟು ವರ್ಷ ನಾವು ಪಟ್ಟ ಕಷ್ಟಕ್ಕೆ ದೇವರು ಈಗ ನಮ್ಮ ಜೊತೆಗೆ ನಿಂತಿದ್ದಾನೆ ಎಂದು ಯೋಗೇಶ್ ಗೌಡ ನೆನೆದು ಯೋಗೇಶ್ ಗೌಡ ಅಕ್ಕ ಅಕ್ಕಮ್ಮ ಕಣ್ಣೀರಿಟ್ಟಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm