ಬ್ರೇಕಿಂಗ್ ನ್ಯೂಸ್
16-04-26 07:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ತಾನು 2023ನೇ ಬ್ಯಾಚ್ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳನ್ನು ಬೆದರಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ. ಬಂಧಿತ ಮಿಥುನ್ ತಾನು ರಾಷ್ಟ್ರೀಯ ಆರೋಗ್ಯ ಅಭಿಯಾನ ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ ಉನ್ನತ ಅಧಿಕಾರಿಯಾಗಿದ್ದೇನೆ ಎಂದು ನಂಬಿಸಿದ್ದ. ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರಿಗೆ, ತನ್ನನ್ನು ಐಎಎಸ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದ ಈತ, ಸ್ವತಃ ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್ಗಳ ಸಭೆ ನಡೆಸಿ ಎಲ್ಲರನ್ನೂ ನಂಬಿಸುವಲ್ಲಿ ಯಶಸ್ವಿಯಾಗಿದ್ದ.
ಸರ್ಜನ್ ಮೂಲಕ ಪರಿಚಯವಾದ ಶ್ರೇಯಸ್ ಬೆಂಗಳೂರಿನ ಮೆಡಿಕಲ್ ಮಾಲೀಕ ಸತೀಶ್ ಎಂಬವರಿಗೆ ಸುಮಾರು 1.8 ಕೋಟಿ ರೂಪಾಯಿ ಮೌಲ್ಯದ ಔಷಧ ಸರಬರಾಜು ಟೆಂಡರ್ ಕೊಡಿಸುವುದಾಗಿ ಮಿಥುನ್ ನಂಬಿಸಿದ್ದ. ಇದಕ್ಕಾಗಿ ಶೇ.20ರಷ್ಟು ಕಮಿಷನ್ ನೀಡಬೇಕೆಂದು ಒಪ್ಪಂದ ಮಾಡಿಕೊಂಡು, ಜಕ್ಕೂರು ಬಳಿ ಬರೋಬ್ಬರಿ 36 ಲಕ್ಷ ರೂ. ಸೇರಿದಂತೆ ಒಟ್ಟು 41 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾನೆ.
ತನ್ನ ಪ್ರಭಾವ ತೋರಿಸಲು ಬೆಂಗಳೂರಿನ ಓರ್ವ ಡಿಸಿಪಿ ಹೆಸರನ್ನು ಬಳಸಿಕೊಂಡಿದ್ದು ಅಮೃತಹಳ್ಳಿ ಪೊಲೀಸರಿಗೂ ಅನುಮಾನ ಬರುವಂತಾಗಿತ್ತು. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಬಣ್ಣ ಬಯಲಾಗಿದೆ. ತಾನು 10 ಲಕ್ಷ ಜನರಲ್ಲಿ ಪರೀಕ್ಷೆ ಬರೆದು ಪಾಸಾದ 900 ಅಧಿಕಾರಿಗಳಲ್ಲಿ ಒಬ್ಬ ಎಂದು ಸುಳ್ಳು ಹೇಳಿ ಪ್ರಭಾವಿ ಸ್ವಾಮೀಜಿಗಳನ್ನೂ ಈತ ನಂಬಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಇನ್ನೂ ಹಲವು ಆಸ್ಪತ್ರೆ ಮಾಲೀಕರಿಗೆ ಆರೋಪಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm