ಬ್ರೇಕಿಂಗ್ ನ್ಯೂಸ್
16-04-26 07:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ತಾನು 2023ನೇ ಬ್ಯಾಚ್ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳನ್ನು ಬೆದರಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ. ಬಂಧಿತ ಮಿಥುನ್ ತಾನು ರಾಷ್ಟ್ರೀಯ ಆರೋಗ್ಯ ಅಭಿಯಾನ ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ ಉನ್ನತ ಅಧಿಕಾರಿಯಾಗಿದ್ದೇನೆ ಎಂದು ನಂಬಿಸಿದ್ದ. ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರಿಗೆ, ತನ್ನನ್ನು ಐಎಎಸ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದ ಈತ, ಸ್ವತಃ ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್ಗಳ ಸಭೆ ನಡೆಸಿ ಎಲ್ಲರನ್ನೂ ನಂಬಿಸುವಲ್ಲಿ ಯಶಸ್ವಿಯಾಗಿದ್ದ.
ಸರ್ಜನ್ ಮೂಲಕ ಪರಿಚಯವಾದ ಶ್ರೇಯಸ್ ಬೆಂಗಳೂರಿನ ಮೆಡಿಕಲ್ ಮಾಲೀಕ ಸತೀಶ್ ಎಂಬವರಿಗೆ ಸುಮಾರು 1.8 ಕೋಟಿ ರೂಪಾಯಿ ಮೌಲ್ಯದ ಔಷಧ ಸರಬರಾಜು ಟೆಂಡರ್ ಕೊಡಿಸುವುದಾಗಿ ಮಿಥುನ್ ನಂಬಿಸಿದ್ದ. ಇದಕ್ಕಾಗಿ ಶೇ.20ರಷ್ಟು ಕಮಿಷನ್ ನೀಡಬೇಕೆಂದು ಒಪ್ಪಂದ ಮಾಡಿಕೊಂಡು, ಜಕ್ಕೂರು ಬಳಿ ಬರೋಬ್ಬರಿ 36 ಲಕ್ಷ ರೂ. ಸೇರಿದಂತೆ ಒಟ್ಟು 41 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾನೆ.
ತನ್ನ ಪ್ರಭಾವ ತೋರಿಸಲು ಬೆಂಗಳೂರಿನ ಓರ್ವ ಡಿಸಿಪಿ ಹೆಸರನ್ನು ಬಳಸಿಕೊಂಡಿದ್ದು ಅಮೃತಹಳ್ಳಿ ಪೊಲೀಸರಿಗೂ ಅನುಮಾನ ಬರುವಂತಾಗಿತ್ತು. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಬಣ್ಣ ಬಯಲಾಗಿದೆ. ತಾನು 10 ಲಕ್ಷ ಜನರಲ್ಲಿ ಪರೀಕ್ಷೆ ಬರೆದು ಪಾಸಾದ 900 ಅಧಿಕಾರಿಗಳಲ್ಲಿ ಒಬ್ಬ ಎಂದು ಸುಳ್ಳು ಹೇಳಿ ಪ್ರಭಾವಿ ಸ್ವಾಮೀಜಿಗಳನ್ನೂ ಈತ ನಂಬಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಇನ್ನೂ ಹಲವು ಆಸ್ಪತ್ರೆ ಮಾಲೀಕರಿಗೆ ಆರೋಪಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm