ಬ್ರೇಕಿಂಗ್ ನ್ಯೂಸ್
16-04-26 10:36 pm HK News Staffer ಕ್ರೈಂ
ಬೆಂಗಳೂರು, ಏ 16: ರಾಜಧಾನಿ ಬೆಂಗಳೂರಿನಾದ್ಯಂತ ಹಲವು ಕಡೆ ಬಾಡಿಗೆ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರನ್ನು ಬಂಧಿಸಿದ್ದಾರೆ ಮತ್ತು ಇತರ ರಾಜ್ಯಗಳ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆಗಳ ಬಗ್ಗೆ ಹಲವು ದಿನಗಳಿಂದ ಸಂಗ್ರಹಿಸಿದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳ ಈ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಮನುವನ, ವಿಜಯನಗರ, ರಾಮಸ್ವಾಮಿಪಾಳ್ಯ, ಬಾಣಸವಾಡಿ, ಅಂದ್ರಹಳ್ಳಿ, ವೀರಭದ್ರೇಶ್ವರ ನಗರ ಮತ್ತು ಬ್ಯಾಡರಹಳ್ಳಿಯಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು, ಅಲ್ಲಿ ಮಹಿಳೆಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
ನಿರ್ದಿಷ್ಟ ಮಾಹಿತಿಯ ಮೇರೆಗೆ, ಈ ಸ್ಥಳಗಳಲ್ಲಿ ಸಂಘಟಿತ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ, ವೇಶ್ಯಾವಾಟಿಕೆಗೆ ಬಲವಂತವಾಗಿ ತಳ್ಳಲ್ಪಟ್ಟ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ.
ಸೆಕ್ಸ್ ದಂಧೆಯನ್ನು ನಡೆಸುತ್ತಿದ್ದ ಆರೋಪ ಮೇಲೆ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಗ್ರಾಹಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ಏರ್ಪಡಿಸಿ ಹೆಚ್ಚಿನ ಹಣ ಗಳಿಸಲು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ವಿಜಯನಗರ, ಬಾಣಸವಾಡಿ ಮತ್ತು ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm