ಬ್ರೇಕಿಂಗ್ ನ್ಯೂಸ್
17-04-26 06:48 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನಾಸಿಕ್ ಟಿಸಿಎಸ್ ಐಟಿ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್, ಮತಾಂತರ ಚಟುವಟಿಕೆ ವಿವಾದ ತೀವ್ರ ಸ್ವರೂಪ ಪಡೆದಿದ್ದು, ವಿಶೇಷ ತನಿಖಾ ತಂಡದ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬೆನ್ನುಬಿದ್ದಿದ್ದಾರೆ. ಇದೇ ವೇಳೆ, ಆರೋಪಿಗಳಲ್ಲಿ ಒಬ್ಬಳಾಗಿರುವ ನಿದಾ ಖಾನ್ ಎಂಬ ಯುವತಿ ತಾನು ಗರ್ಭಿಣಿಯಾಗಿದ್ದು ಬಂಧನ ಕ್ರಮದಿಂದ ವಿನಾಯ್ತಿ ನೀಡಬೇಕೆಂದು ನಿರೀಕ್ಷಣಾ ಜಾಮೀನು ಸಲ್ಲಿಸಿದ್ದಾರೆ.
ನಿದಾ ಖಾನ್ 2021ರಲ್ಲಿ ಟಿಸಿಎಸ್ ಕಂಪನಿ ಸೇರಿದ್ದು, ಈಗ 25ರ ಹರೆಯದ ಯುವತಿ. ಸಹೋದ್ಯೋಗಿ ಹಿಂದು ಯುವತಿಯರನ್ನು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಳೆಂದು ಹಲವರು ದೂರು ನೀಡಿದ್ದರಿಂದ ಒಂಬತ್ತು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್, ಮತಾಂತರಕ್ಕೆ ಒತ್ತಡ ಇತ್ಯಾದಿ ಅಂಶಗಳಿದ್ದು, 2022ರ ಫೆಬ್ರವರಿಯಿಂದ 2026ರ ಮಾರ್ಚ್ ನಡುವೆ ಕೃತ್ಯ ಆಗಿರುವುದಾಗಿ ಹೇಳಿದ್ದಾರೆ.
ಎಚ್ಆರ್ ವಿಭಾಗದ ಹೆಡ್ ಅಶ್ವಿನಿ ಚೈನಾನಿ, ಸೀನಿಯರ್ ಉದ್ಯೋಗಿಗಳಾದ ಡ್ಯಾನಿಶ್ ಶೇಖ್, ತೌಸಿಫ್ ಅತ್ತಾರ್, ರಜಾ ಮೆಮನ್, ಶಾರುಕ್ ಖುರೇಷಿ, ಶಫಿ ಶೇಕ್, ಆಸಿಫ್ ಅಫ್ತಾಬ್ ಅನ್ಸಾರಿ ಎಂಬ ಏಳು ಮಂದಿಯನ್ನು ಬಂಧಿಸಲಾಗಿದ್ದು, ಇತರೇ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕೆಲವು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇರಿಸಿಕೊಂಡು ವಂಚಿಸಿದ್ದರು. ಇನ್ನು ಕೆಲವರನ್ನು ಅಸಭ್ಯವಾಗಿ ಮುಟ್ಟುವುದು, ಅಶ್ಲೀಲವಾಗಿ ನಿಂದಿಸುವುದು ಮಾಡುತ್ತಿದ್ದರು. ಈ ಬಗ್ಗೆ ಎಚ್ಆರ್ ವಿಭಾಗಕ್ಕೆ ದೂರು ನೀಡಿದ್ದರೂ, ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದರು.
ಕೆಲವು ಮುಸ್ಲಿಂ ಸೀನಿಯರ್ ಉದ್ಯೋಗಿಗಳು ತಮ್ಮ ಜೊತೆಗೆ ನಮಾಜ್ ಮಾಡುವಂತೆಯೂ ಒತ್ತಡ ಹೇರುತ್ತಿದ್ದರು ಎಂದೂ ಯುವತಿಯರು ಆರೋಪಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಉದ್ಯೋಗಿಗಳನ್ನು ಟಿಸಿಎಸ್ ಕಂಪನಿ ಕೆಲಸದಿಂದ ವಜಾ ಮಾಡಿದ್ದು ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದೆ. ಇದಲ್ಲದೆ, ಗಂಭೀರ ಆರೋಪ ಎದುರಾಗಿದ್ದರಿಂದ ನಾಸಿಕ್ ಕಚೇರಿಯ ಎಲ್ಲ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೆಲಸ ಮಾಡುವಂತೆ ಸೂಚಿಸಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm