ಬ್ರೇಕಿಂಗ್ ನ್ಯೂಸ್
18-04-26 10:37 pm HK News Staffer ಕ್ರೈಂ
ಮಹಾರಾಷ್ಟ್ರ, ಎಪ್ರಿಲ್ 18 : ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಜಗಳಗಳು ಸಾಮಾನ್ಯವಾದರೂ, ಅವು ಕೆಲವೊಮ್ಮೆ ಭೀಕರ ಅಂತ್ಯಕ್ಕೆ ಕಾರಣವಾಗುವ ಉದಾಹರಣೆಗಳು ಇವೆ. ಮಹಾರಾಷ್ಟ್ರದ ಯಾವತ್ಮಾಲ್ ಜಿಲ್ಲೆಯ ಅರ್ನಿ ತಾಲೂಕಿನ ಬೋರ್ಗಾಂವ್ನಲ್ಲಿ ನಡೆದ ಘಟನೆ ಇದಕ್ಕೆ ಮತ್ತೊಂದು ಉದಾಹರಣೆ. ಮಟನ್ ಸರಿಯಾಗಿ ಬೇಯಿಸಿಲ್ಲ ಎಂಬ ಕಾರಣಕ್ಕೆ ಗಂಡ ಮಾಡಿದ ಅವಮಾನವನ್ನು ಸಹಿಸಲಾಗದೆ, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತ ಚೇತನಾ ಅವರ ಪತಿ ಮನೋಜ್ ಜಾಧವ್ ತನ್ನ ಸ್ನೇಹಿತನನ್ನು ಮನೆಗೆ ಮಟನ್ ಊಟಕ್ಕೆ ಆಹ್ವಾನಿಸಿದ್ದನು. ಈ ವೇಳೆ ಅತಿಥಿಗಳ ಎದುರೇ ಮಟನ್ ಸರಿಯಾಗಿ ಬೇಯಿಸಿಲ್ಲ ಎಂದು ಹೆಂಡತಿಗೆ ಗದರಿಸಿ ಅವಮಾನಿಸಿದ್ದಾನೆ. ಇದೇ ವಿಚಾರಕ್ಕೆ ದಂಪತಿಗಳ ನಡುವೆ ವಾಗ್ವಾದ ಉಂಟಾಗಿದ್ದು, ಇದರಿಂದ ಮನನೊಂದ ಚೇತನಾ ತೀವ್ರ ನಿರಾಶೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಚೇತನಾ ಸಾವಿನ ಹಿಂದೆ ಗಂಡನ ಅನುಮಾನ ಸ್ವಭಾವವೂ ಕಾರಣವಾಗಿರಬಹುದು ಎಂಬ ಮಾಹಿತಿ ಹೊರಬಂದಿದೆ. ಮನೋಜ್ ಕುಡಿತದ ಚಟ ಹೊಂದಿದ್ದು, ಆಗಾಗ ಮನೆಗೆ ಬಂದು ಜಗಳವಾಡುತ್ತಿದ್ದನೆಂದು ಹೇಳಲಾಗಿದೆ. ಅಲ್ಲದೆ, 2015ರಲ್ಲಿ ಅವನ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣ ದಾಖಲಾಗಿತ್ತು. ನಂತರ 2017ರಲ್ಲಿ ಚೇತನಾ ‘ಸಂತೋಷದಿಂದ ಬದುಕಬೇಕು’ ಎಂಬ ನಿರ್ಧಾರದಿಂದ ಗಂಡನನ್ನು ಕ್ಷಮಿಸಿ ಸಂಸಾರ ಮುಂದುವರಿಸಿದ್ದಳು.
ಆದರೆ ಅವಮಾನದಿಂದ ಮನನೊಂದು ಚೇತನಾ ತಕ್ಷಣವೇ ವಿಷ ಸೇವಿಸಿದ್ದಾಳೆ. ಆಕೆಯನ್ನು ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಈ ಸಂಬಂಧ ಚೇತನಾಳ ಚಿಕ್ಕಪ್ಪ ಮನೋಹರ್ ರಾಥೋಡ್ ನೀಡಿದ ದೂರಿನ ಮೇರೆಗೆ, ಪೊಲೀಸರು ಮನೋಜ್ ಜಾಧವ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
ಇಂತಹ ಘಟನೆಗಳು ಕುಟುಂಬ ಜೀವನದಲ್ಲಿ ಸಹನೆ, ಪರಸ್ಪರ ಗೌರವ ಮತ್ತು ಸಂವಹನದ ಮಹತ್ವವನ್ನು ನೆನಪಿಸುತ್ತವೆ. ಸಣ್ಣ ವಿಷಯಗಳು ದೊಡ್ಡ ದುರಂತಗಳಿಗೆ ಕಾರಣವಾಗದಂತೆ, ಮನಸ್ಸಿನ ಒತ್ತಡಗಳನ್ನು ಹಂಚಿಕೊಳ್ಳುವುದು ಮತ್ತು ಸಮಸ್ಯೆಗಳಿಗೆ ಸಮಾಧಾನಕರ ಪರಿಹಾರ ಹುಡುಕುವುದು ಅತ್ಯಗತ್ಯವಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm