ಬ್ರೇಕಿಂಗ್ ನ್ಯೂಸ್
18-04-26 10:37 pm HK News Staffer ಕ್ರೈಂ
ಮಹಾರಾಷ್ಟ್ರ, ಎಪ್ರಿಲ್ 18 : ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಜಗಳಗಳು ಸಾಮಾನ್ಯವಾದರೂ, ಅವು ಕೆಲವೊಮ್ಮೆ ಭೀಕರ ಅಂತ್ಯಕ್ಕೆ ಕಾರಣವಾಗುವ ಉದಾಹರಣೆಗಳು ಇವೆ. ಮಹಾರಾಷ್ಟ್ರದ ಯಾವತ್ಮಾಲ್ ಜಿಲ್ಲೆಯ ಅರ್ನಿ ತಾಲೂಕಿನ ಬೋರ್ಗಾಂವ್ನಲ್ಲಿ ನಡೆದ ಘಟನೆ ಇದಕ್ಕೆ ಮತ್ತೊಂದು ಉದಾಹರಣೆ. ಮಟನ್ ಸರಿಯಾಗಿ ಬೇಯಿಸಿಲ್ಲ ಎಂಬ ಕಾರಣಕ್ಕೆ ಗಂಡ ಮಾಡಿದ ಅವಮಾನವನ್ನು ಸಹಿಸಲಾಗದೆ, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತ ಚೇತನಾ ಅವರ ಪತಿ ಮನೋಜ್ ಜಾಧವ್ ತನ್ನ ಸ್ನೇಹಿತನನ್ನು ಮನೆಗೆ ಮಟನ್ ಊಟಕ್ಕೆ ಆಹ್ವಾನಿಸಿದ್ದನು. ಈ ವೇಳೆ ಅತಿಥಿಗಳ ಎದುರೇ ಮಟನ್ ಸರಿಯಾಗಿ ಬೇಯಿಸಿಲ್ಲ ಎಂದು ಹೆಂಡತಿಗೆ ಗದರಿಸಿ ಅವಮಾನಿಸಿದ್ದಾನೆ. ಇದೇ ವಿಚಾರಕ್ಕೆ ದಂಪತಿಗಳ ನಡುವೆ ವಾಗ್ವಾದ ಉಂಟಾಗಿದ್ದು, ಇದರಿಂದ ಮನನೊಂದ ಚೇತನಾ ತೀವ್ರ ನಿರಾಶೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಚೇತನಾ ಸಾವಿನ ಹಿಂದೆ ಗಂಡನ ಅನುಮಾನ ಸ್ವಭಾವವೂ ಕಾರಣವಾಗಿರಬಹುದು ಎಂಬ ಮಾಹಿತಿ ಹೊರಬಂದಿದೆ. ಮನೋಜ್ ಕುಡಿತದ ಚಟ ಹೊಂದಿದ್ದು, ಆಗಾಗ ಮನೆಗೆ ಬಂದು ಜಗಳವಾಡುತ್ತಿದ್ದನೆಂದು ಹೇಳಲಾಗಿದೆ. ಅಲ್ಲದೆ, 2015ರಲ್ಲಿ ಅವನ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣ ದಾಖಲಾಗಿತ್ತು. ನಂತರ 2017ರಲ್ಲಿ ಚೇತನಾ ‘ಸಂತೋಷದಿಂದ ಬದುಕಬೇಕು’ ಎಂಬ ನಿರ್ಧಾರದಿಂದ ಗಂಡನನ್ನು ಕ್ಷಮಿಸಿ ಸಂಸಾರ ಮುಂದುವರಿಸಿದ್ದಳು.
ಆದರೆ ಅವಮಾನದಿಂದ ಮನನೊಂದು ಚೇತನಾ ತಕ್ಷಣವೇ ವಿಷ ಸೇವಿಸಿದ್ದಾಳೆ. ಆಕೆಯನ್ನು ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಈ ಸಂಬಂಧ ಚೇತನಾಳ ಚಿಕ್ಕಪ್ಪ ಮನೋಹರ್ ರಾಥೋಡ್ ನೀಡಿದ ದೂರಿನ ಮೇರೆಗೆ, ಪೊಲೀಸರು ಮನೋಜ್ ಜಾಧವ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
ಇಂತಹ ಘಟನೆಗಳು ಕುಟುಂಬ ಜೀವನದಲ್ಲಿ ಸಹನೆ, ಪರಸ್ಪರ ಗೌರವ ಮತ್ತು ಸಂವಹನದ ಮಹತ್ವವನ್ನು ನೆನಪಿಸುತ್ತವೆ. ಸಣ್ಣ ವಿಷಯಗಳು ದೊಡ್ಡ ದುರಂತಗಳಿಗೆ ಕಾರಣವಾಗದಂತೆ, ಮನಸ್ಸಿನ ಒತ್ತಡಗಳನ್ನು ಹಂಚಿಕೊಳ್ಳುವುದು ಮತ್ತು ಸಮಸ್ಯೆಗಳಿಗೆ ಸಮಾಧಾನಕರ ಪರಿಹಾರ ಹುಡುಕುವುದು ಅತ್ಯಗತ್ಯವಾಗಿದೆ.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm