ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm